ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಕೇಸ್: ನಾಲ್ವರು ಮಹಿಳೆಯರು ಸೇರಿ 10 ಜನರ ಮೇಲೆ ಎಫ್ಐಆರ್
Team Udayavani, Aug 5, 2023, 12:04 PM IST
ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಐವರನ್ನು ಬಂಧಿಸಲಾಗಿದೆ
ಬುಧವಾರ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಭಿಲ್ವಾರಾ ಜಿಲ್ಲೆಯಲ್ಲಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಸುಟ್ಟ ಅವಶೇಷಗಳು ಕಲ್ಲಿದ್ದಲು ಕುಲುಮೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.
ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಆ ಪ್ರದೇಶದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಅವರನ್ನು ಅಮಾನತುಗೊಳಿಸಲಾಗಿದೆ.
ಅಪ್ರಾಪ್ತ ಬಾಲಕಿಯನ್ನು ಭಿಲ್ವಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ ಕೊಲೆ ಮಾಡಿ ನಂತರ ಸುಟ್ಟು ಹಾಕಲಾಯಿತು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದರು.
ಶೋಧ ಕಾರ್ಯಾಚರಣೆಯ ನಂತರ, ಶುಕ್ರವಾರ ಗ್ರಾಮದ ಕೊಳದಿಂದ ಅರ್ಧ ಸುಟ್ಟ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಏನು? ಕಳೆದ ಬುಧವಾರ ದನ ಮೇಯಿಸಲು ಹೋಗಿದ್ದ ವೇಳೆ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದೇ ರಾತ್ರಿ ಆಕೆಯ ದೇಹವನ್ನು ಸುಟ್ಟು ಹಾಕಿದ್ದರು.
ಬಾಲಕಿಯ ದೇಹದ ಕೆಲವು ಭಾಗಗಳನ್ನು ಕುಲುಮೆಯಲ್ಲಿ ಸುಟ್ಟು ಹಾಕಲಾಗಿದೆ ಮತ್ತು ಇತರ ಭಾಗಗಳನ್ನು ಎಲ್ಲಾ ಸಾಕ್ಷ್ಯಗಳನ್ನು ನಾಶಪಡಿಸಲು ಹತ್ತಿರದ ಕೊಳದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು “ಅಪರೂಪದಲ್ಲಿ ಅಪರೂಪದ ಪ್ರಕರಣ” ಎಂದು ಕರೆದ ಭಿಲ್ವಾರಾ ಎಸ್ಪಿ ಆದರ್ಶ್ ಸಿಧು, ಆರೋಪಿಗಳಿಗೆ ಮರಣದಂಡನೆ ವಿಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:Gruha Jyothi Scheme ಚಾಲನೆಗೆ ಕ್ಷಣಗಣನೆ: ಊಟದ ಮೆನುವಿನಲ್ಲಿ ಲಡ್ಡು- ಪಲಾವ್
ಆರು ಪುರುಷರು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಆರೋಪಿಗಳು ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಧು ಹೇಳಿದರು.
ಬಂಧಿತ ಆರೋಪಿಗಳನ್ನು ಕಲು ಲಾಲ್ (25) ಮತ್ತು ಕನ್ಹಾ (21), ಸಂಜಯ್ ಕುಮಾರ್ (20), ಮತ್ತು ಪಪ್ಪು (35) ಎಂದು ಗುರುತಿಸಲಾಗಿದೆ. ಬಂಧನದಲ್ಲಿರುವ ಅಪ್ರಾಪ್ತ ವಯಸ್ಕನ ವಯಸ್ಸನ್ನು ಪ್ರಸ್ತುತ ಕಂಡುಹಿಡಿಯಲಾಗುತ್ತಿದೆ ಎಂದು ಅವರು ಹೇಳಿದರು.
ಕನ್ಹಾ ಮತ್ತು ಕಾಲು ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್ಪಿ ಹೇಳಿದರು.
ಇಬ್ಬರು ಪುರುಷ ಆರೋಪಿಗಳ ಪತ್ನಿಯರು ಸೇರಿದಂತೆ ನಾಲ್ವರು ಮಹಿಳೆಯರೂ ಸಾಕ್ಷಿ ನಾಶದಲ್ಲಿ ಭಾಗಿಯಾಗಿದ್ದಾರೆ. ಇನ್ನು ಇಬ್ಬರು ಆರೋಪಿಗಳು ಆರೋಪಿಯ ತಾಯಿ ಹಾಗೂ ಮತ್ತೋರ್ವ ಆರೋಪಿಯ ಸಹೋದರಿ ಎಂದು ಎಸ್ಪಿ ತಿಳಿಸಿದ್ದಾರೆ.
ಕುಲುಮೆಗೆ ಹಾಕಿದಾಗ ಬಾಲಕಿ ಜೀವಂತವಾಗಿದ್ದಳೋ ಅಥವಾ ಪ್ರಜ್ಞಾಹೀನಳಾಗಿದ್ದಳೋ ಮತ್ತು ದೇಹವನ್ನು ಕತ್ತರಿಸಿದ ನಂತರ ಅದರಲ್ಲಿ ಎಸೆಯಲಾಗಿದೆಯೇ ಎಂಬುದನ್ನು ವಿಧಿವಿಜ್ಞಾನ ತಂಡವು ದೃಢಪಡಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ