Gaming app ನಿಂದ ಪರಿಚಯವಾದ ವ್ಯಕ್ತಿಯಿಂದ ಹಿಂದೂ ಮಹಿಳೆಯ ಮತಾಂತರಕ್ಕೆ ಯತ್ನ
Team Udayavani, Jun 25, 2023, 10:08 AM IST
ಜೈಪುರ: ಗೇಮಿಂಗ್ ಆ್ಯಪ್ ನಲ್ಲಿ ಪರಿಚಯವಾದ ಮುಸ್ಲಿಂ ವ್ಯಕ್ತಿಯೊಬ್ಬನ ಮೇಲೆ ವಿವಾಹಿತ ಹಿಂದೂ ಮಹಿಳೆಯನ್ನು ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ.
ರಾಜಸ್ಥಾನದ ಸಿಕಾರ್ನ ಹಿಂದೂ ವಿವಾಹಿತ ಮಹಿಳೆಯೊಬ್ಬಳು ಫ್ರೀ ಫೈರ್ ಎಂಬ ಮೊಬೈಲ್ ಗೇಮ್ ನಲ್ಲಿ ತಯ್ಯಬ್ ಎಂಬಾತನನ್ನು ಭೇಟಿಯಾಗಿದ್ದಾಳೆ. ತಯ್ಯಬ್ ಅಲಿಗಢ ಮೂಲದವನು. ಗಾರ್ಮೆಂಟ್ಸ್ ಶಾಪ್ ವೊಂದನ್ನು ಹೊಂದಿದ್ದಾನೆ ಎಂದು ಮಹಿಳೆಯೊಂದಿಗೆ ಪರಿಚಯ ಮಾಡಿಕೊಂಡಿದ್ದ. ಗೇಮಿಂಗ್ ನಲ್ಲಿ ಚಾಟ್ ಮಾಡುತ್ತಾ ಪರಸ್ಪರ ಆತ್ಮೀಯರಾಗಿ ನಂಬರ್ ಬದಲಾಯಿಸಿಕೊಂಡಿದ್ದಾರೆ.
ಈ ವಿಚಾರ ಮಹಿಳೆಯ ಮನೆಯವರಿಗೆ ಗೊತ್ತಾಗಿದೆ.ಮಹಿಳೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ತಯ್ಯಬ್ ಯನ್ನು ಮಹಿಳೆಗೆ ನಮಾಜ್ ಹೇಗೆ ಮಾಡುವುದು ಎನ್ನುವುದರ ಬಗ್ಗೆ ಹೇಳುತ್ತಿದ್ದ. ಅದಕ್ಕೆ ಸಂಬಂಧಪಟ್ಟ ಲಿಂಕ್ ಗಳನ್ನು ಕಳುಹಿಸುತ್ತಿದ್ದ. ಹಿಂದೂ ಧರ್ಮವನ್ನು ಅನುಸರಿಸಬಾರದು. ಬಿಂದಿಯನ್ನು ಇಡಬಾರದೆಂದು ಹೇಳುತ್ತಿದ್ದ. ಮಹಿಳೆಯನ್ನು ಆತ ಮುಸ್ಲಿಂ ಹೆಸರಿನಲ್ಲಿ ಕರೆಯುತ್ತಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ. ಆದರೆ, ಕುಟುಂಬದವರು ಈಗ ದೂರನ್ನು ಹಿಂಪಡೆದಿದ್ದಾರೆ ಎಂದು ಸಿಕರ್ನ ಪೊಲೀಸ್ ವರಿಷ್ಠಾಧಿಕಾರಿ ಕರಣ್ ಶರ್ಮಾ ತಿಳಿಸಿದ್ದಾರೆ.
ಇದನ್ನೂ ಓದಿ: Goods trains collide: ಗೂಡ್ಸ್ ರೈಲುಗಳ ನಡುವೆ ಢಿಕ್ಕಿ: ಹಳಿತಪ್ಪಿದ 12 ಬೋಗಿಗಳು
ನನ್ನ ಸಹೋದರಿ ಪ್ರಕರಣವನ್ನು ಮುಂದುವರಿಸಲು ಬಯಸದ ಕಾರಣ, ಕೇಸ್ ಹಿಂದಕ್ಕೆ ಪಡೆದುಕೊಂಡಿದ್ದಾರೆ ಎಂದು ಮಹಿಳೆಯ ಸಹೋದರ ʼಇಂಡಿಯಾ ಟುಡೇʼ ಗೆ ಹೇಳಿದ್ದಾರೆ.
ಪೊಲೀಸರಿಗೆ ದೂರು ನೀಡುವ ಮೊದಲು ಮನೆಯವರು ತಯ್ಯಬ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಂತರ ತಯ್ಯಬ್ ಸ್ನೇಹಿತರೊಬ್ಬರು ಕರೆಗೆ ಪ್ರತಿಕ್ರಿಯಿಸಿದ್ದು, ತಯ್ಯಬ್ ಅಂತಹ ಕೆಲಸವನ್ನು ಮಾಡಲು ಸಾಧ್ಯವಿಲ್ಲ ಎಂದು ಮಹಿಳೆಯ ಮನೆಯವರಿಗೆ ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ