ದೇಶದ ಹಲವೆಡೆ ಎಟಿಎಂ ಖಾಲಿ; 3 ದಿನದಲ್ಲಿ ಸರಿಯಾಗುತ್ತದೆ: ಕೇಂದ್ರ
Team Udayavani, Apr 17, 2018, 12:24 PM IST
ಹೊಸದಿಲ್ಲಿ : ನೋಟು ಅಮಾನ್ಯದ ಕರಾಳ ದಿನಗಳನ್ನು ನೆನಪಿಸುವ ರೀತಿಯಲ್ಲಿ ತೆಲಂಗಾಣ, ಹೈದರಾಬಾದ್, ವಾರಾಣಸಿ, ವಡೋದರ, ಭೋಪಾಲ್, ಪಟ್ನಾ, ದಿಲ್ಲಿಯ ಕೆಲವು ಪ್ರದೇಶಗಳು ಸೇರಿದಂತೆ ಅನೇಕ ರಾಜ್ಯಗಳು ಮತ್ತು ನಗರಗಳಲ್ಲಿನ ಎಟಿಎಂಗಳಲ್ಲಿ ಹಣ ಬರಿದಾಗಿದೆ; ನಗದು ಕೊರತೆ ತೀವ್ರವಾಗಿದೆ; ಸಾಮಾನ್ಯ ಆರ್ಥಿಕ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ವರದಿಗಳು ತಿಳಿಸಿದೆ.
ಇಂದು ಬೆಳಗ್ಗಿನಿಂದಲೇ ದೇಶದ ಅನೇಕ ರಾಜ್ಯಗಳು ಮತ್ತು ನಗರಗಳಲ್ಲಿ ಜನರು ಎಟಿಎಂ ಗಳ ಮುಂದೆ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ. ಅನೇಕ ಎಟಿಎಂಗಳ ಮುಂದೆ “ನೋ ಕ್ಯಾಶ್’ ಎಂಬ ಫಲಕವನ್ನು ತೂಗು ಹಾಕಲಾಗಿರುವುದು ಕಂಡು ಬಂದಿದೆ. ಇನ್ನೂ ಅನೇಕ ಎಟಿಎಂಗಳು ತಾಂತ್ರಿಕ ಕಾರಣಗಳಿಂದಾಗಿ ಮುಚ್ಚಿವೆ.
ಜನರು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ನಗದಿಗಾಗಿ ಮುಗಿ ಬೀಳುವಾಗ ಅದನ್ನು ನಿಭಾಯಿಸುವ ಮೂಲ ಸೌಕರ್ಯ ಬ್ಯಾಂಕುಗಳಲ್ಲಿ ಇಲ್ಲ ಎಂದು ಅನೇಕ ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ.
ಈ ನಡುವೆ ಕೇಂದ್ರ ಹಣಕಾಸು ಸಹಾಯಕ ಸಚಿವ ಎಸ್ ಪಿ ಶುಕ್ಲಾ ಅವರು “ಈಗ ಈ ಹೊತ್ತಿನಲ್ಲಿ ನಮ್ಮ ಬಳಿಕ 1,25,000 ಕೋಟಿ ನಗದು ಲಭ್ಯತೆ ಇದೆ. ಈಗ ವಿಷಯವೇನೆಂದರೆ ಕೆಲವು ರಾಜ್ಯಗಳಲ್ಲಿ ಅತ್ಯಧಿಕ ನಗದು ಇದೆ; ಕೆಲವು ರಾಜ್ಯಗಳಲ್ಲಿ ನಗದು ಕೊರತೆ ಇದೆ. ಆದುದರಿಂದ ಸರಕಾರ ರಾಜ್ಯ ವಾರ ಸಮಿತಿಯನ್ನು ರೂಪಿಸಿದೆ; ಆರ್ಬಿಐ ಕೂಡ ಸಮಿತಿಗಳನ್ನು ರಚಿಸಿದೆ. ಇವುಗಳ ಮೂಲಕ ನಗದು ಇಲ್ಲದ ರಾಜ್ಯಗಳಿಗೆ ನಗದು ಪೂರೈಸುವ ಕೆಲಸ ಆರಂಭಿಸಲಾಗಿದೆ; ಇನ್ನು ಮೂರು ದಿನಗಳ ಒಳಗೆ ದೇಶಾದ್ಯಂತ ನಗದು ಲಭ್ಯತೆ ಮಾಮೂಲಿ ಸ್ಥಿತಿಗೆ ಮರಳುತ್ತದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ