ಕ್ಯಾಸಲ್ ರಾಕ್ ಮಣ್ಣು ತೆರವು ; ಶೀಘ್ರದಲ್ಲೇ ರೈಲು ಸಂಚಾರ ಪುನರಾರಂಭ
Team Udayavani, Jul 30, 2023, 5:58 PM IST
ಪಣಜಿ: ಕೆಲವು ದಿನಗಳ ಹಿಂದೆ ಕ್ಯಾಸಲ್ ರಾಕ್-ಕಾರಂಜೋಲ್ ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಕಾರಣ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿತ್ತು,ಕೆಲ ರೈಲುಗಳನ್ನು ಗೊತ್ತುಪಡಿಸಿದ ನಿಲ್ದಾಣದ ಮೊದಲ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಸತತ ಸುಮಾರು ಎಂಟು ದಿನಗಳ ಮಣ್ಣು ತೆರವು ಕಾರ್ಯಾಚರಣೆಯ ನಂತರ ರೈಲ್ವೆ ಹಳಿಯನ್ನು ಸುಗಮಗೊಳಿಸಲಾಗಿದೆ.
ರೈಲು ಹಳಿಗಳ ಮೇಲಿನ ಮಣ್ಣು, ಕಲ್ಲು ಮತ್ತು ಮರಗಳನ್ನು ತೆಗೆದುಹಾಕುವ ಕಾರ್ಯ ಪೂರ್ಣಗೊಂಡಿದ್ದು, ಹಳಿಗಳನ್ನು ಸುಗಮಗೊಳಿಸುವಲ್ಲಿ ಸಿಬಂದಿಗಳು ಯಶಸ್ವಿಯಾಗಿದ್ದಾರೆ. ರೈಲು ಮಾರ್ಗದ ಪರೀಕ್ಷೆಯೂ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತ ಸಂಭವಿಸಿದಾಗ, ಜುಲೈ 25 ರಂದು ಹೊರಡಬೇಕಿದ್ದ ವಾಸ್ಕೋ-ಡ-ಗಾಮಾ ಯಶವಂತಪುರ ರೈಲು ಸಂಖ್ಯೆ 17310 ಅನ್ನು ಸಹ ರದ್ದುಗೊಳಿಸಲಾಗಿತ್ತು. ಇದೀಗ ಹಳಿಗಳ ಮೇಲೆ ಬಿದ್ದಿದ್ದ ಮಣ್ಣಿನ ರಾಶಿಯನ್ನು ತೆರವುಗೊಳಿಸುವ ಕಾರ್ಯ ಪೂರ್ಣಗೊಂಡಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಶೀಘ್ರದಲ್ಲೇ ಈ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು