ನಾಲ್ವರ ಮೇಲೆ BMW ಕಾರು ಹರಿಸಿದ ಮಹಿಳೆ: ಅಪಘಾತಕ್ಕೆ ನಾಯಿಯೇ ಕಾರಣ ಎಂದು ಸಬೂಬು !
Team Udayavani, Aug 2, 2020, 10:00 AM IST
ನವದೆಹಲಿ: ನಾಲ್ವರ ಮೇಲೆ 29 ವರ್ಷದ ಮಹಿಳೆಯೊಬ್ಬರು ಬಿಎಂಡಬ್ಲ್ಯೂ ಕಾರು ಹರಿಸಿದ ಘಟನೆ ದಕ್ಷಿಣ ದೆಹಲಿಯಲ್ಲಿ ಜುಲೈ 31ರ ಶುಕ್ರವಾರ ರಾತ್ರಿ ನಡೆದಿದೆ.
ಕಾರು ಹರಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದು, ಲಜ್ ಪತ್ ನಗರದ ಅಮರ್ ಕಾಲೋನಿಯಲ್ಲಿ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದೆ.
ಅಪಘಾತವಾದ ಕೂಡಲೇ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು ಆಕೆಯನ್ನು ರೋಶ್ನಿ ಆರೋರ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಈಕೆ ಫ್ಯಾಷನ್ ಡಿಸೈನರ್ ಆಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಐಸ್ಕ್ರೀಂ ತಿನ್ನಲೆಂದು ಕಾರನ್ನು ನಿಲ್ಲಿಸಿದ್ದು, ಕಾರಿನಲ್ಲಿ ನನ್ನೊಂದಿಗೆ ಸಾಕು ನಾಯಿ ಕೂಡ ಇತ್ತು. ಅದು ಏಕಾಏಕಿ ನನ್ನ ಮೇಲೆ ಎಗರಿದ ಪರಿಣಾಮ ಗಾಬರಿಯಲ್ಲಿ ಬ್ರೇಕ್ ಪೆಡಲ್ ಬದಲು ಕಾರಿನ ಆ್ಯಕ್ಸಿಲೇಟರ್ ಒತ್ತಿದೆ. ಹೀಗಾಗಿ ಅಪಘಾತವಾಯಿತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
#roadaccident #delhi #delhicrime pic.twitter.com/wiFZMdBwJM
— Prateek Kumar (@prateekpress) August 1, 2020
ಅಪಘಾತದ ಸಂದರ್ಭದಲ್ಲಿ ಐಷರಾಮಿ ಕಾರು ಎದುರಿಗಿದ್ದ ಐಸ್ಕ್ರೀಂ ಗಾಡಿಗೆ ಜೋರಾಗಿ ಗುದ್ದಿದ್ದು, ಗಾಡಿಯು ಅನತಿ ದೂರದವರೆಗೆ ಸಾಗಿ ಬಳಿಕ ಪಲ್ಟಿ ಹೊಡೆದಿದೆ. ಐಸ್ಕ್ರೀಂ ಗಾಡಿಯ ಮಾಲೀಕ ಸೇರಿ ಅದರ ಸುತ್ತ ನಿಂತಿದ್ದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದೆ.
ತಕ್ಷಣವೇ ಅರೋರಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಅವರು ಮದ್ಯಪಾನ ಮಾಡಿರಲಿಲ್ಲ ಎಂಬುದು ಖಚಿತವಾಗಿದೆ. ಹಾಗಾಗಿ ಅವರನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ