ಬಿಜೆಪಿ ಅಧ್ಯಕ್ಷನ ಪುತ್ರನಿಂದ ಸಹಪಾಠಿ ಮೇಲೆ ಹಲ್ಲೆ; 2 ತಿಂಗಳ ಹಳೆ ವಿಡಿಯೋ ವೈರಲ್; ಕೇಸ್ ದಾಖಲು
Team Udayavani, Jan 18, 2023, 11:45 AM IST
ಹೈದರಾಬಾದ್: ಸಹಪಾಠಿ ವಿದ್ಯಾರ್ಥಿ ಮೇಲೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಮಗ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣ ದಾಖಲಾಗಿದೆ.
ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ್ ಸಾಯಿ ಸ್ನೇಹಿತರೊಂದಿಗೆ ಸೇರಿ ಕಾಲೇಜು ಆವರಣದಲ್ಲಿ ಹಾಗೂ ಹಾಸ್ಟೆಲ್ ಕೋಣೆಯಲ್ಲಿ ಸಹಪಾಠಿ ಶ್ರೀರಾಮ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕೃತ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಾಲೇಜು ಮಂಡಳಿ ಬಂಡಿ ಭಗೀರಥ್ ಸಾಯಿ ಅವರ ವಿರುದ್ಧ ದೂರು ದಾಖಲಿಸಿದೆ.
ಈ ಕುರಿತು ಸ್ವತಃ ಬಂಡಿ ಸಂಜಯ್ ಕುಮಾರ್ ಅವರ ಕಚೇರಿ ವಿಡಿಯೋ ರಿಲೀಸ್ ಮಾಡಿ ಸ್ಪಷ್ಟನೆ ಕೊಟ್ಟಿದೆ. ವಿಡಿಯೋದಲ್ಲಿ ಭಗೀರಥ್ ಸಾಯಿ ಮಾತನಾಡಿದ್ದು, ಶ್ರೀರಾಮ್ ನನ್ನ ಸ್ನೇಹಿತೆಯ ತಂಗಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆಗೆ ಅಸಭ್ಯ ಸಂದೇಶವನ್ನು ಕಳುಹಿಸಿದ್ದಾನೆ. ಹೀಗಾಗಿ ಈ ಕೃತ್ಯ ನಡೆಯಿತು ಎಂದು ಭಗೀರಥ ಸಾಯಿ ಹೇಳಿ ಕ್ಷಮೆ ಕೇಳಿದ್ದಾರೆ.
ಇನ್ನು ಈ ವಿಷಯದ ಬಗ್ಗೆ ಮಾತನಾಡಿರುವ ಶ್ರೀರಾಮ್, ಇದು ಎರಡು ತಿಂಗಳ ಹಿಂದಿನ ವಿಷಯ. ಈಗ ಅನಗತ್ಯವಾಗಿ ವೈರಲ್ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಿ ಮಾತುಕತೆ ಆಗಿದೆ ಎಂದು ಹೇಳಿಕೊಂಡಿದ್ದಾರೆ.
ಸದ್ಯ ತೆಲಂಗಾಣದಲ್ಲಿ ಈ ಘಟನೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ಬಂಡಿ ಸಂಜಯ್ ಕುಮಾರ್ ಇದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪಿತೂರಿ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ