ಗಂಗೆಗಿಂತ ಕಾವೇರಿಯೇ ವಿಷಕಾರಿ?


Team Udayavani, Dec 24, 2017, 6:00 AM IST

Cauvery-GAGA.jpg

ಚೆನ್ನೈ: ದೇಶದ ಪವಿತ್ರ ನದಿ ಗಂಗೆಯಷ್ಟು ಮಲಿನ ಮತ್ತು ವಿಷಕಾರಿ ಅಂಶಗಳಿರುವ ನದಿ ಬೇರೊಂದಿಲ್ಲ ಎಂದು ಈವರೆಗೆ ಉದಾಹರಿಸಲಾಗುತ್ತಿತ್ತು. ಆದರೆ, ಅರಗಿಸಿಕೊಳ್ಳಲಾಗದ ಸತ್ಯವೊಂದು ಈಗ ಹೊರ ಬಿದ್ದಿದೆ. 

ಕರ್ನಾಟಕದ ಜೀವ ನದಿ ಕಾವೇರಿ ಗಂಗಾ ನದಿಗಿಂತ ಶೇ.600ರಷ್ಟು ಅಧಿಕ ಪ್ರಮಾಣದಲ್ಲಿ ಹೆಚ್ಚಿನ ವಿಷಕಾರಿ ರಾಸಾಯನಿಕ ತ್ಯಾಜ್ಯಗಳನ್ನು ಹೊಂದಿದೆ ಎಂಬ ಅಂಶ ಗೊತ್ತಾಗಿದೆ. ಪ್ರತಿ ವರ್ಷ ಅದಕ್ಕೆ 8.3 ಕ್ಯೂಬಿಕ್‌ ಕಿಮೀ ಪ್ರಮಾಣದಲ್ಲಿ ತ್ಯಾಜ್ಯ ಸೇರಿಕೊಳ್ಳುತ್ತದೆ ಎಂದು ಅಣ್ಣಾ ವಿವಿ ನಡೆಸಿದ ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ. ಪ್ರತಿ ಲೀಟರ್‌ಗೆ 753 ಮಿಲಿ ಗ್ರಾಂನಷ್ಟು ತ್ಯಾಜ್ಯ ಜೀವ ನದಿಗೆ ಸೇರಿಕೊಳ್ಳುತ್ತದೆ. ಅಂದರೆ ಗಂಗಾ ನದಿಗೆ ಸೇರಿಕೊಳ್ಳುವ ತ್ಯಾಜ್ಯದ ಐದು ಪಟ್ಟು ಹೆಚ್ಚು ಎನ್ನುವುದು ಗಮನಾರ್ಹ. ಡಿ.9ರಂದು ವಿವಿ ಬಿಡುಗಡೆ ಮಾಡಿರುವ ಅಧ್ಯಯನದ ಅಂಶಗಳನ್ನು ಉಲ್ಲೇಖೀಸಿ “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಕರ್ನಾಟಕದ ಮೇಕೆದಾಟು, ರುದ್ರಪಟ್ಟಣ, ತಮಿಳುನಾಡಿನ ಶ್ರೀರಾಮ ಸಮುದ್ರಂ, ಕಂಡಿಯೂರ್‌, ಅಪ್ಪಕುಡತ್ತಾನ್‌, ಪನ್ನವಾಡಿಗಳಲ್ಲಿ ಅಂತರ್ಜಲ ಕಲುಷಿತವಾಗಿದೆ ಎಂಬ ವರದಿಗಳ ಬೆನ್ನಲ್ಲೇ ಈ ಅಂಶ ಬೆಳಕಿಗೆ ಬಂದಿದೆ. ಹೀಗಾಗಿ ಈ ಪ್ರದೇಶಗಳ ನೀರು ಕುಡಿಯುವ ಉಪಯೋಗಕ್ಕೂ ಲಭ್ಯವಿಲ್ಲದಂತಾಗಿದೆ. ಜವಳಿ, ಸಿಮೆಂಟ್‌, ಡೈಯಿಂಗ್‌ ಮತ್ತು ರಾಸಾಯನಿಕ ಕಾರ್ಖಾನೆಗಳು ನದಿ ತಟದಲ್ಲೇ ಸ್ಥಾಪನೆಯಾಗಿ, ತ್ಯಾಜ್ಯಗಳನ್ನು ಅದಕ್ಕೆ ಬಿಡುತ್ತಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಅಧ್ಯಯದಲ್ಲಿ ಗೊತ್ತಾಗಿದೆ. ಈ ಬಗ್ಗೆ ಮಾತನಾಡಿದ ಅಧ್ಯಯನ ತಂಡದ ಮುಖ್ಯಸ್ಥ  ಎಲ್‌.ಇಲಾಂಗೋ “ಸೋಡಿಯಂ ಮತ್ತು ಕ್ಲೋರೈಡ್‌ ಕಾವೇರಿ ನೀರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ. ಕೈಗಾರಿಕಾ ಸ್ಥಾವರಗಳು ಎಲ್ಲಿ ಹೆಚ್ಚಿನ ಪ್ರಮಾಣದಲ್ಲಿವೆಯೋ ಆ ಪರಿಸರದಲ್ಲಿ ಈ ಅಂಶ ಹೆಚ್ಚಾಗಿ ಕಂಡು ಬಂದಿದೆ. ಇತರ ನದಿ ಮೂಲದ ಪರಿಸರದ ಮೇಲೆ ಅಧ್ಯಯನ ನಡೆಸಿದ ವೇಳೆ ಈ ಅಂಶ ಗೊತ್ತಾಗಿದೆ.’ ಎಂದಿದ್ದಾರೆ.

ದುಷ್ಪರಿಣಾಮವೇನು?: ನೀರಿನಲ್ಲಿ ಸೋಡಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಅಧಿಕ ರಕ್ತದೊತ್ತಡ (ಹೈಪರ್‌ಟೆನ್ಶನ್‌), ಸಂತಾನೋತ್ಪತ್ತಿ ಮೇಲೆ ಪ್ರತಿಕಕೂಲ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ಅಣ್ಣಾ ವಿವಿ ಅಧ್ಯಯನದಲ್ಲಿ ಏನಿದೆ?
ನದಿ ಹೆಸರು     ಬಿಡಲಾಗಿರುವ ಒಟ್ಟು ತ್ಯಾಜ್ಯ                  ತ್ಯಾಜ್ಯ ಪ್ರಮಾಣ
(ಟಿಡಿಎಸ್‌ ಪ್ರತಿ ಲೀಟರ್‌ಗೆ ಮಿಲಿಗ್ರಾಂ)    (ಪ್ರತಿ ವರ್ಷಕ್ಕೆ ಕ್ಯೂಬಿಕ್‌ ಕಿಮೀ)
ಕಾವೇರಿ            753                                                8
ಗಂಗಾ              130                                                493
ಕೃಷ್ಣಾ               320                                                30
ಗೋದಾವರಿ       200                                               105

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.