ಕಾವೇರಿ ನಿರ್ವಹಣಾ ಮಂಡಳಿ ರಚನೆ ಶೀಘ್ರ?
Team Udayavani, Mar 26, 2018, 6:25 AM IST
ಚೆನ್ನೈ: ಕಾವೇರಿ ನೀರು ನಿರ್ವಹಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ನಿರ್ವಹಣಾ ಮಂಡಳಿ ರಚನೆಯಾಗಲಿದೆ. ಅದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಪುಟ ಟಿಪ್ಪಣಿ ಸಿದ್ಧಗೊಂಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಆರು ವಾರಗಳಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬೇಕೆಂದು ಹೇಳಿತ್ತು.
ಯಾವ ರಾಜ್ಯಕ್ಕೆ ಎಷ್ಟು ಪ್ರಮಾಣದ ನೀರು ಹಂಚಿಕೆ ಮಾಡಬೇಕು ಎಂಬುದರ ಬಗ್ಗೆ ಒಂದು ಬಾರಿ ಮಂಡಳಿ ರಚನೆಯಾದ ಬಳಿಕ ಅದುವೇ ತೀರ್ಮಾನ ಕೈಗೊಳ್ಳಲಿದೆ. ಮಂಡಳಿಯಲ್ಲಿ ಹೆಚ್ಚುವರಿ ಸದಸ್ಯರನ್ನು ಒಳಗೊಳ್ಳಬೇಕೆಂದು ಕರ್ನಾಟಕ ಮತ್ತು ಕೇರಳ ಪ್ರತಿಪಾದಿಸಿರುವ ಹಿನ್ನೆಲೆಯಲ್ಲಿ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ.
2007ರಲ್ಲಿ ನೀಡಲಾಗಿದ್ದ ಆದೇಶದ ಪ್ರಕಾರ ಕಾವೇರಿ ನೀರು ನಿರ್ವಹಣಾ ಮಂಡಳಿಯಲ್ಲಿ ಮೂವರು ಪೂರ್ಣ ಪ್ರಮಾಣದ ಸದಸ್ಯರು ಇರಲಿದ್ದಾರೆ. ಇನ್ನು ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯಿಂದ ಆರು ಮಂದಿ ತಾತ್ಕಾಲಿಕ ಸದಸ್ಯರು ಇರಲಿದ್ದಾರೆ. ಈ ನಡುವೆ, ಕರ್ನಾಟಕ ಸರ್ಕಾರ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಿದ್ದರೆ, ತಮಿಳುನಾಡು ಸರ್ಕಾರ ಅದರ ಪರವಾಗಿಯೇ ಬಲವಾಗಿ ವಾದ ಮಂಡಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ