ಬ್ಯಾಂಕ್‌ ಮೋಸಗಾರರಿಗೆ ಸಿಬಿಐ ದಾಳಿ ಬಿಸಿ

ಬೆಂಗಳೂರಿನ ಏಗಾನ್‌ ಬ್ಯಾಟರೀಸ್‌ ಕಂಪನಿಗೂ ದಾಳಿ ಬಿಸಿ

Team Udayavani, Jul 3, 2019, 6:00 AM IST

40

ನವದೆಹಲಿ: ದೇಶದ ನಾನಾ ಬ್ಯಾಂಕುಗಳಿಗೆ ವಿವಿಧ ಕಂಪನಿಗಳು, ಉದ್ಯಮಿಗಳು ಮಾಡಿರುವ ಮೋಸದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮಂಗಳವಾರ, ಕರ್ನಾಟಕದ ಕೋಲಾರ ಸೇರಿದಂತೆ ವಿವಿಧ ರಾಜ್ಯಗಳ 18 ನಗರಗಳ ಸುಮಾರು 61 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ.

ಒಟ್ಟಾರೆ 640 ಕೋಟಿ ರೂ. ವಂಚನೆ ನಡೆಸಿದ 14 ಪ್ರಕರಣಗಳೊಂದಿಗೆ ದಾಳಿ ಆರಂಭಿಸಿದ ಸಿಬಿಐ, ದಿನಾಂತ್ಯದ ಹೊತ್ತಿಗೆ ಮತ್ತೆ ಮೂರು ಹೊಸ ಪ್ರಕರಣಗಳನ್ನು ದಾಖಲಿಸಿದ್ದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 17ಕ್ಕೇರಿತಲ್ಲದೆ, ಎಲ್ಲಾ ಪ್ರಕರಣಗಳ ವಂಚನೆಯ ಮೊತ್ತ ಕೂಡ 1,139 ಕೋಟಿ ರೂ.ಗಳಿಗೆ ಹೆಚ್ಚಳವಾಯಿತು.

300 ಅಧಿಕಾರಿಗಳಿಂದ ಕಾರ್ಯಾಚರಣೆ: ದೇಶದ ನಾನಾ ರಾಜ್ಯಗಳಲ್ಲಿನ ಸಿಬಿಐ ಶಾಖೆಗಳಿಂದ ಸುಮಾರು 300 ಅಧಿಕಾರಿಗಳನ್ನು ಸೇರಿಸಿದ ಸಂಸ್ಥೆಯ ನಿರ್ದೇಶಕ ರಿಷಿ ಕುಮಾರ್‌ ಶುಕ್ಲಾ, ಅವರೆಲ್ಲರನ್ನೂ ವಿವಿಧ ತಂಡಗಳನ್ನಾಗಿ ವಿಂಗಡಿಸಿ, ಕೋಲಾರ, ದೆಹಲಿ, ಮುಂಬೈ, ಲೂಧಿಯಾನ, ಥಾಣೆ, ವಲ್ಸದ್‌, ಪುಣೆ, ಪಲಾನಿ, ಗಯಾ, ಗುರುಗ್ರಾಮ, ಚಂಡೀಗಡ, ಭೋಪಾಲ್, ಸೂರತ್‌ ಮುಂತಾದ ನಗರಗಳಿಗೆ ಕಳುಹಿಸಿದ್ದರು. ಎಲ್ಲಾ ದಾಳಿಗಳ ಮೇಲ್ವಿಚಾರಣೆಯನ್ನು ಅವರೇ ಖುದ್ದಾಗಿ ವಹಿಸಿಕೊಂಡಿದ್ದರು.

ಬೆಂಗಳೂರಿನ ಕಂಪನಿಗೂ ಬಿಸಿ: ಪ್ರಕರಣದಲ್ಲಿ ಆರೋಪಿಗಳಾಗಿರುವ ವಿವಿಧ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು, ಪ್ರವರ್ತಕರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳಿಗಾಗಿ ಕೂಲಂಕಶ ಹುಡುಕಾಟ ನಡೆಸಿದರು. ದಾಳಿಗೊಳಗಾದ ನಿವಾಸ, ಕಚೇರಿಗಳಲ್ಲಿ ಬೆಂಗಳೂರು ಮೂಲದ ಏಗಾನ್‌ ಬ್ಯಾಟರೀಸ್‌ (98.75 ಕೋಟಿ ರೂ.-ಎಸ್‌ಬಿಐ), ಲೂಧಿಯಾನ ಮೂಲದ ಸುಪ್ರೀಂ ಟೆಕ್ಸ್‌ ಮಾರ್ಟ್‌(ಭಾರತೀಯ ಸ್ಟೇಟ್ ಬ್ಯಾಂಕ್‌ಗೆ 143.25 ಕೋಟಿ ರೂ. ವಂಚನೆ), ಗಯಾ ಮೂಲದ ರಾಮನಂದಿ ಹೋಟೆಲ್ಸ್ ಆ್ಯಂಡ್‌ ರೆಸಾರ್ಟ್ಸ್ ಲಿಮಿಟೆಡ್‌ (131.79 ಕೋಟಿ ರೂ.- ಸೆಂಟ್ರಲ್ ಬ್ಯಾಂಕ್‌ ಆಫ್ ಇಂಡಿಯಾ), ನೋಯ್ಡಾ ಮೂಲದ ನಫ್ತೋಗಜ್‌ ಇಂಡಿಯಾ ಪ್ರೈ. ಲಿಮಿಟೆಡ್‌ (93 ಕೋಟಿ ರೂ.- ಕಾರ್ಪೊರೇಷನ್‌ ಬ್ಯಾಂಕ್‌) ಪ್ರಮುಖವಾದವು.

ಮಳೆಯನ್ನೂ ಲೆಕ್ಕಿಸದೆ ದಾಳಿ: ಮುಂಬೈನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ವಜ್ರ ವ್ಯಾಪಾರಿ ಜತಿನ್‌ ಮೆಹ್ತಾಗೆ ಸೇರಿದ ಆಸ್ತಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಎಕ್ಸಿಮ್‌ ಬ್ಯಾಂಕಿಗೆ 200 ಕೋಟಿ ರೂ. ಸೇರಿದಂತೆ ವಿವಿಧ ಬ್ಯಾಂಕುಗಳಿಗೆ ಒಟ್ಟು 6,500 ಕೋಟಿ ರೂ. ವಂಚಿಸಿರುವ ಪ್ರಕರಣ ಅವರ ಮೇಲಿದೆ. ಇನ್ನು, ವಾಣಿಜ್ಯ ನಗರಿಯಲ್ಲಿ ಇನ್ನೂ ಎರಡು ಕಂಪನಿಗಳಿಗೆ ಸೇರಿದ 5 ಕಡೆ ದಾಳಿ ನಡೆಸಲಾಯಿತು.

ಮೂರು ಹೊಸ ಪ್ರಕರಣ ಸೇರ್ಪಡೆ: ವಿವಿಧೆಡೆ ನಡೆಸಿದ ದಾಳಿಯ ವೇಳೆ, ಕೆಲವು ವ್ಯಕ್ತಿಗಳು, ಕೆಲವು ಬ್ಯಾಂಕುಗಳಿಂದ ಅಕ್ರಮವಾಗಿ ಮನೆ ಸಾಲವನ್ನೂ ಪಡೆದಿರುವುದು ಬೆಳಕಿಗೆ ಬಂದಿದೆ. ಜತೆಗೆ, ಈ ಸಾಲ ನೀಡುವಿಕೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿರುವುದು ಸ್ಪಷ್ಟವಾಗಿದ್ದು, ಆ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಜತೆಗೆ, ನಿಯಮಗಳ ಮೀರಿ ಸಾಲ ಕೊಟ್ಟಿರುವ ಬ್ಯಾಂಕ್‌ ಅಧಿಕಾರಿಗಳನ್ನು ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.

110 ಕೋಟಿಯ ಆಸ್ತಿ ಜಪ್ತಿ

ದೇಶದ ಅತಿದೊಡ್ಡ ಸಕ್ಕರೆ ಕಾರ್ಖಾನೆಯಾದ ಸಿಂಭೋಲಿ ಶುಗರ್ಸ್‌ ಲಿ.ಗೆ ಸೇರಿದ 110 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ಅವ್ಯವಹಾರ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

•ದಿನದ ತಪಾಸಣೆಗಳ ವೇಳೆ ಮತ್ತೆ ಮೂರು ಪ್ರಕರಣಗಳ ಸೇರ್ಪಡೆ
•ಒಟ್ಟು ಮೋಸದ ಮೊತ್ತ 1,139 ಕೋಟಿ ರೂ.ಗಳಿಗೆ ಏರಿಕೆ
•14 ಪ್ರಕರಣಗಳ 18 ನಗರಗಳಲ್ಲಿ ಸಿಬಿಐ ದಾಳಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.