
ಬ್ಯಾಂಕ್ ವಂಚನೆ ಪ್ರಕರಣ; ಲಂಚ ಪಡೆಯುತ್ತಿದ್ದ ಸಿಬಿಐ ಅಧಿಕಾರಿಗಳೇ ಸಿಬಿಐ ಬಲೆಗೆ!
ಡಿಎಸ್ ಪಿ ಶ್ರೇಣಿಯ ಅಧಿಕಾರಿ ಆರ್ ಕೆ ರಿಷಿ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಸಿಬಿಐ ದೂರು
Team Udayavani, Jan 15, 2021, 12:49 PM IST

ನವದೆಹಲಿ:ಅಪರಾಧ, ಹಣಕಾಸು ವರ್ಗಾವಣೆ ಸೇರಿದಂತೆ ಹೈಪ್ರೊಫೈಲ್ ಪ್ರಕರಣಗಳ ತನಿಖೆ ನಡೆಸುವ ಸಿಬಿಐ ಅಧಿಕಾರಿಗಳೇ ಇದೀಗ ಸುದ್ದಿಗೆ ಗ್ರಾಸವಾಗಿದ್ದು, ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಿಬಿಐ ಅಧಿಕಾರಿಗಳೇ ಸಿಬಿಐ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಗಾಜಿಯಾಬಾದ್ ಸಿಬಿಐ ಕೇಂದ್ರ ಮೇಲೆ ಸಿಬಿಐ ಅಧಿಕಾರಿಗಳು ಗುರುವಾರ(ಜನವರಿ 15, 2021) ದಾಳಿ ನಡೆಸಿದ್ದು, ಡಿಎಸ್ ಪಿ ಶ್ರೇಣಿಯ ಅಧಿಕಾರಿ ಆರ್ ಕೆ ರಿಷಿ ಸೇರಿದಂತೆ ನಾಲ್ವರು ಅಧಿಕಾರಿಗಳ ವಿರುದ್ಧ ಸಿಬಿಐ ದೂರನ್ನು ದಾಖಲಿಸಿಕೊಂಡಿದೆ.
ಇನ್ನುಳಿದಂತೆ ಸಿಬಿಐನ ಬಿಎಸ್ ಎಫ್ ಸಿ (ಬ್ಯಾಂಕಿಂಗ್ ಸೆಕ್ಯುರಿಟಿ ಆ್ಯಂಡ್ ಫ್ರಾಡ್ ಸೆಲ್)ನ ಇಬ್ಬರು ಅಧಿಕಾರಿಗಳಾದ ಕಪಿಲ್ ಧನ್ಕಾಡ್, ಸ್ಟೆನೋ ಸಮೀರ್ ಕುಮಾರ್ ಸಿಂಗ್ ಹಾಗೂ ಡಿಎಸ್ಪಿ ಆರ್ ಕೆ ಸಾಂಗ್ವಾನ್ ಸಿಬಿಐ ದಾಳಿಯಲ್ಲಿ ಸಿಕ್ಕಿಬಿದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅರುಣ್ ಸಿಂಗ್ ಭೇಟಿಯಾದ ರೇಣುಕಾಚಾರ್ಯ: ಯೋಗೇಶ್ವರ್ ವಿರುದ್ಧ ದೂರು
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ನೆರವು ನೀಡಲು ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ತನ್ನದೇ ಅಧಿಕಾರಿಗಳ ವಿರುದ್ಧ ಸಿಬಿಐ ದೂರು ದಾಖಲಿಸಿಕೊಂಡಿದೆ. ಅಷ್ಟೇ ಅಲ್ಲ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತನಿಖೆಯಲ್ಲಿ ಕೆಲವು ವಕೀಲರು ಮತ್ತು ಅಪರಿಚಿತ ವ್ಯಕ್ತಿಗಳು ಹೊಂದಾಣಿಕೆ ಮಾಡಿಕೊಂಡಿರುವುದಾಗಿಯೂ ಸಿಬಿಐ ಆರೋಪಿಸಿದೆ.
ಲಂಚ ಪಡೆಯುವ ಕುರಿತು ಖಚಿತ ಮಾಹಿತಿ ಪಡೆದಿದ್ದ ಸಿಬಿಐ ಅಧಿಕಾರಿಗಳು ತಮ್ಮದೇ ಏಜೆನ್ಸಿಯ ಅಧಿಕಾರಿಗಳನ್ನು ಬಂಧಿಸಲು ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿರುವುದಾಗಿ ವರದಿ ವಿವರಿಸಿದೆ. ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಇಂಡೋನೇಷ್ಯಾ: ಪ್ರಬಲ ಭೂಕಂಪನ, ಕುಸಿದು ಬಿದ್ದ ಆಸ್ಪತ್ರೆ; ಅವಶೇಷಗಳಡಿ ರೋಗಿಗಳು
ದೆಹಲಿ, ಗಾಜಿಯಾಬಾದ್, ನೋಯ್ಡಾ, ಗುರ್ಗಾಂವ್, ಮೀರತ್ ಮತ್ತು ಕಾನ್ಪುರ್ ಸೇರಿದಂತೆ ಆರೋಪಿಗಳಿಗೆ ಸೇರಿದ 14 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಸಿಬಿಐ ವಕ್ತಾರ ಆರ್ ಸಿ ಜೋಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

ನಕಲಿ ಬ್ಯಾಂಕ್ ಅಧಿಕಾರಿಗಳ “KYC ಅಪ್ಡೇಟ್” ಖೆಡ್ಡಾ !
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!