Land-for-jobs scam; ಲಾಲು, ರಾಬ್ರಿ ಮತ್ತು ತೇಜಸ್ವಿ ವಿರುದ್ಧ ಸಿಬಿಐ ಚಾರ್ಜ್ಶೀಟ್
Team Udayavani, Jul 3, 2023, 9:10 PM IST
ಹೊಸದಿಲ್ಲಿ: ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕೇಂದ್ರೀಯ ತನಿಖಾ ದಳ ಸೋಮವಾರ ಆರೋಪಪಟ್ಟಿ ಸಲ್ಲಿಸಿದೆ.
ದೆಹಲಿಯ ರೂಸ್ ಅವೆನ್ಯೂ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಚಾರ್ಜ್ಶೀಟ್ನ ವಿಚಾರಣೆಗೆ ಇನ್ನೂ ದಿನಾಂಕವನ್ನು ನೀಡಲಾಗಿಲ್ಲ. ಜುಲೈ 12 ರಂದು ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಿಗದಿಪಡಿಸಿದೆ.
ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎಗೆ ಮರಳಬಹುದು ಎಂಬ ಊಹಾಪೋಹಗಳಿರುವಾಗಲೇ ಸಿಬಿಐ ಚಾರ್ಜ್ಶೀಟ್ ಬಂದಿದೆ. 2004 ರಿಂದ 2009 ರವರೆಗೆ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಲಾಲು ಯಾದವ್ ಅವರ ಕುಟುಂಬಕ್ಕೆ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಬದಲಾಗಿ ರೈಲ್ವೆಯಲ್ಲಿ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಹೇಳಲಾದ ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.
ಲಾಲು ಯಾದವ್ ಅವರ ಕುಟುಂಬ ಮತ್ತು ಅವರ ಸಹಚರರಿಗೆ ಹೆಚ್ಚಿನ ರಿಯಾಯಿತಿ ದರದಲ್ಲಿ ಉಡುಗೊರೆಯಾಗಿ ಅಥವಾ ಮಾರಾಟವಾದ ಜಮೀನುಗಳಿಗೆ ಉದ್ಯೋಗಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!