ಸಿಬಿಐ ಶುದ್ಧೀಕರಣ: ಮಧ್ಯಾವಧಿ ನಿರ್ದೇಶಕರಿಂದ 20 ಅಧಿಕಾರಿಗಳ ವರ್ಗಾವಣೆ
Team Udayavani, Jan 23, 2019, 5:42 AM IST
ಹೊಸದಿಲ್ಲಿ : ಈಚಿನ ದಿನಗಳಲ್ಲಿ ವಿಶ್ವಾಸಾರ್ಹತೆಯ ನಷ್ಟ ಮತ್ತು ಸ್ವೇಚ್ಛಾಚಾರದ ಕಳಂಕಕ್ಕೆ ಗುರಿಯಾಗಿರುವ ದೇಶದ ಪರಮೋಚ್ಚ ತನಿಖಾ ಸಂಸ್ಥೆ ಸಿಬಿಐ ಯನ್ನು ಶುದ್ಧೀಕರಿಸುವ ನಿಟ್ಟಿನಲ್ಲಿ ಮಧ್ಯಾವಧಿ ಮುಖ್ಯಸ್ಥ ಎಂ ನಾಗೇಶ್ವರ ರಾವ್ ಅವರು ಸುಮಾರು 20ರಷ್ಟು ಉನ್ನತ ಅಧಿಕಾರಿಗಳನ್ನು ವರ್ಗಾಯಿಸಿದ್ದಾರೆ.
ಸಿಬಿಐ ನಲ್ಲಿ ಅಧಿಕಾರದ ಹತೋಟಿ ಮತ್ತು ಸಂತುಲನೆಯನ್ನು ಕಾಪಿಡುವ ಸಲುವಾಗಿ ಮತ್ತು ಈಗಿರುವ ಮಾನವ ಸಂಪನ್ಮೂಲವನ್ನು ಗರಿಷ್ಠವಾಗಿ ಬಳಸಿಕೊಳ್ಳುವ ಧ್ಯೇಯದಲ್ಲಿ ಈ ನಿರ್ಣಾಯಕ ವರ್ಗಾವಣೆಗಳನ್ನು ಮಾಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.
ಸಿಬಿಐ ನ ವಿವಿಧ ಮಟ್ಟಗಳಲ್ಲಿನ ಈ ವರ್ಗಾವಣೆ ಮತ್ತು ನಿಯೋಜನೆ ಪ್ರಕ್ರಿಯೆ ಇನ್ನೂ ಒಂದು ವಾರ ಕಾಲ ಮುಂದುವರಿಯಲಿದೆ ಎಂದವರುಹೇಳಿದ್ದಾರೆ.
ಸಿಬಿಐ ನಲ್ಲಿ ಕೈಗೊಳ್ಳಲಾಗಿರುವ ಈ ಮಹತ್ವದ ಸರ್ಜರಿಯಲ್ಲಿ 20ಕ್ಕೂ ಅಧಿಕ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಇಲ್ಲವೇ ಹೊಸ ಹೊಣೆಗಾರಿಕೆಯೊಂದಿಗೆ ಪುನರ್ ನಿಯೋಜಿಸಲಾಗಿದೆ.
2ಜಿ ತರಂಗಾಂತರ ಹಗರಣದಂತಹ ಪ್ರಮುಖ ಕೇಸುಗಳನ್ನು ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಕೂಡ ವರ್ಗಾಯಿಸಲಾಗಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್ಗೆ ಜೈಶಂಕರ್ ಚಾಟಿ
MUST WATCH
ಹೊಸ ಸೇರ್ಪಡೆ
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್