ಅಕ್ರಮ ಗಣಿಗಾರಿಕೆ: ಆಂಧ್ರಪ್ರದೇಶ, ತೆಲಂಗಾಣದ 25 ಸ್ಥಳಗಳಲ್ಲಿ ಸಿಬಿಐ ದಾಳಿ, ಶೋಧ ಕಾರ್ಯ
ಸಿಬಿಐ ತಂಡ ಮಹತ್ವದ ದಾಖಲೆ, ಮೊಬೈಲ್ ಫೋನ್ ಗಳು ಹಾಗೂ ನಗದನ್ನು ವಶಪಡಿಸಿಕೊಂಡಿದೆ
Team Udayavani, Nov 20, 2020, 10:30 AM IST
ಅಮರಾವತಿ:ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ (ನವೆಂಬರ್ 20) ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದರಲ್ಲಿ ಟಿಡಿಪಿ ಮುಖಂಡ, ಗುರಾಝಾಲಾ ಕ್ಷೇತ್ರದ ಮಾಜಿ ಶಾಸಕ ಯರಪತಿನೇನಿ ಶ್ರೀನಿವಾಸ್ ರಾವ್ ಹಾಗೂ ಇತರರ ಮನೆ, ಕಚೇರಿ ಸೇರಿರುವುದಾಗಿ ವರದಿ ತಿಳಿಸಿದೆ.
ಮನೆ ಮತ್ತು ಕಚೇರಿಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಸಿಬಿಐ ತಂಡ ಮಹತ್ವದ ಮಾಹಿತಿಯನ್ನೊಳಗೊಂಡ ದಾಖಲೆ, ಮೊಬೈಲ್ ಫೋನ್ ಗಳು ಹಾಗೂ ನಗದನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದೆ.
ಗುಂಟೂರು ಜಿಲ್ಲೆ ಹಾಗೂ ಹೈದರಾಬಾದ್ ನ ಸುಮಾರು 25 ಸ್ಥಳಗಳಲ್ಲಿ ಸಿಬಿಐ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಆಂಧ್ರಪ್ರದೇಶ ಸಿಬಿ-ಸಿಐಡಿ ಮಾಡಿಕೊಂಡ ಮನವಿ ಮೇರೆಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ರವಾನಿಸಿದ್ದು, ಅದನ್ನು ಅಂಗೀಕರಿಸಿದ ನಂತರ ಸಿಬಿಐ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು ಎಂದು ವರದಿ ಹೇಳಿದೆ.
17 ಮಂದಿ ಆರೋಪಿಗಳು ಅಕ್ರಮವಾಗಿ ಹಾಗೂ ಅನಧಿಕೃತವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ಕೋನಾಂಕಿ ಗ್ರಾಮದ ಪಿಡುಗುರಾಲ್ಲಾ ಮಂಡಲ್, ಕೇಸಾನುಪಲ್ಲಿ ಮತ್ತು ದಾಚೇಪಲ್ಲಿ ಮಂಡಲ್ ನ ನಾಡಿಕುಡಿ ಹಾಗೂ ಗುಂಟೂರು ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸುಣ್ಣದ ಕಲ್ಲಿನ ಸಾಗಾಣೆ ಮಾಡುತ್ತಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ