ಗುತ್ತಿಗೆ ಹಂಚಿಕೆಯಲ್ಲಿ ಅಕ್ರಮ;ಲಾಲುಗೆ ಸಿಬಿಐ ಶಾಕ್,12 ಕಡೆ ದಾಳಿ
Team Udayavani, Jul 7, 2017, 9:51 AM IST
ಹೊಸದಿಲ್ಲಿ: ಮಾಜಿ ಕೇಂದ್ರ ರೈಲ್ವೇ ಸಚಿವ, ಆರ್ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ಗೆ ಹೊಸ ಸಂಕಷ್ಟ ಎದುರಾಗಿದ್ದು , ಶುಕ್ರವಾರ ಸಿಬಿಐ ರೈಲ್ವೇ ಸಚಿವರಾಗಿದ್ದ ವೇಳೆ ಹೊಟೇಲ್ಗಳಿಗೆ ನೀಡಿದ ಗುತ್ತಿಗೆ ಅಕ್ರಮದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು 12 ಕಡೆಗಳಲ್ಲಿ ದಾಳಿ ನಡೆಸಿ ಶಾಕ್ ನೀಡಿದೆ.
ಲಾಲು , ಪತ್ನಿ ರಾಬ್ರಿ ದೇವಿ , ಪುತ್ರ ಬಿಹಾರ ಡಿಸಿಎಂ ತೇಜಸ್ವಿ ,ಆಗೀನ ಐಆರ್ಸಿಡಿಸಿ ಎಂಡಿ ಪಿ.ಕೆ ಗೋಯಲ್,ಲಾಲು ಆಪ್ತ ಪ್ರೇಮ್ಚಂದ್ರ ಗುಪ್ತಾ ಪತ್ನಿ ಸುಜಾತಾ ಮತ್ತಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ದೆಹಲಿ,ಪಾಟ್ನಾ,ರಾಂಚಿ, ಪುರಿ,ಗುರ್ಗಾಂವ್ ಸೇರಿದಂತೆ 12 ಕಡೆಗಳಲ್ಲಿ ಏಕಕಾಲದಲ್ಲಿ ಸಿಬಿಐ ಅಧಿಕಾರಿ ಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
2006 ರಲ್ಲಿ ಬಿಎನ್ಆರ್ ಹೊಟೇಲ್ಗಳ ನಿರ್ವಹಣೆಗೆ ಸುಜಾತಾ ಹೊಟೇಲ್ಸ್ಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ದಾಳಿ ನಡೆಸಲಾಗಿದೆ. ಸುಜಾತಾ ಹೊಟೇಲ್ಸ್ ನ್ನು ರೈಲ್ವೇ ಇಲಾಖೆ ಈ ವರ್ಷಾರಂಭದಲ್ಲಿ ಆಧೀನಕ್ಕೆ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್