ಸಿಬಿಐ: ಮೋದಿ ಮಧ್ಯಸ್ಥಿಕೆ
Team Udayavani, Oct 23, 2018, 6:00 AM IST
ಹೊಸದಿಲ್ಲಿ: ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐನಲ್ಲಿ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಮಾಂಸ ರಫ್ತುದಾರ ಮೊಯಿನ್ ಖುರೇಶಿ ಪ್ರಕರಣದ ತನಿಖೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ದೂರು ದಾಖಲಿಸಲಾಗಿದ್ದರೆ, ಸೋಮವಾರ ಡೆಪ್ಯುಟಿ ಎಸ್ಪಿ ದೇವೇಂದ್ರ ಕುಮಾರ್ರನ್ನು ಬಂಧಿಸಲಾಗಿದೆ. ಈ ಮಧ್ಯೆ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಹಾಗೂ ನಿರ್ದೇಶಕ ಅಲೋಕ್ ಕುಮಾರ್ರನ್ನು ಪ್ರಧಾನಿ ಕಚೇರಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಮನ್ಸ್ ನೀಡಿದ್ದಾರೆ. ಮೂಲಗಳ ಪ್ರಕಾರ ರಾಕೇಶ್ ವಿರುದ್ಧ ದೂರು ದಾಖಲಿಸುವುದಕ್ಕೂ ಮುನ್ನ ಸರಕಾರದ ಅನುಮತಿ ಪಡೆದಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಆಕ್ಷೇಪ ವ್ಯಕ್ತಪಡಿ ಸಿದೆ ಎನ್ನಲಾಗಿದೆ.
ಖುರೇಶಿ ಪ್ರಕರಣದಲ್ಲಿ ಆರೋಪಿ ಸ್ಥಾನದಿಂದ ಕೈಬಿಡುವಂತೆ ಸತೀಶ್ ಸನಾ ಎಂಬ ವ್ಯಕ್ತಿ ಟಿಡಿಪಿ ಸಂಸದರ ಮೂಲಕ ಅಲೋಕ್ ಕುಮಾರ್ಗೆ 2 ಕೋಟಿ ರೂ. ಲಂಚ ನೀಡಿದ್ದೇನೆ ಎಂದು ವಿಚಾರಣೆ ವೇಳೆ ಹೇಳಿದ್ದಾಗಿ ರಾಕೇಶ್ ಅಸ್ತಾನಾ ತಂಡ ವರದಿ ಮಾಡಿತ್ತು. ಆದರೆ ವಿಚಾರಣೆ ನಡೆಸಲಾಗಿದೆ ಎಂದು ರಾಕೇಶ್ ವರದಿ ಮಾಡಿದ ದಿನ ಸನಾ ಹೈದರಾಬಾದ್ನಲ್ಲಿ ಇದ್ದ ಎಂದು ಅಲೋಕ್ ಕುಮಾರ್ ತಂಡ ಆರೋಪಿಸಿದೆ. ರಾಕೇಶ್ ತಂಡದಲ್ಲಿ ದೇವೇಂದ್ರ ಕುಮಾರ್ ಪ್ರಮುಖ ತನಿಖಾ ಅಧಿಕಾರಿ ಯಾಗಿದ್ದು, ಸನಾ ಹೇಳಿಕೆ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಅಲೋಕ್ ಕುಮಾರ್ ತಂಡ ಆರೋಪಿಸಿ ಬಂಧಿಸಿದೆ. ರಾಕೇಶ್ ಗುಜರಾತ್ ಕೇಡರ್ ಅಧಿಕಾರಿಯಾಗಿದ್ದು, ಮೋದಿ ಅಧಿಕಾರಕ್ಕೆ ಬಂದ ನಂತರ ವಿಶೇಷ ನಿರ್ದೇಶಕರಾಗಿ ನೇಮಕವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್