ಲಲಿತಕಲಾ ಅಕಾಡೆಮಿ ವಿರುದ್ಧ ಸಿಬಿಐ ತನಿಖೆ?
Team Udayavani, Mar 2, 2017, 3:45 AM IST
ನವದೆಹಲಿ: ಲಲಿತಕಲಾ ಅಕಾಡೆಮಿ ವಿರುದ್ಧ ಪ್ರಧಾನಿ ಕಾರ್ಯಾಲಯಕ್ಕೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಅಕಾಡೆಮಿಯ ಕಾರ್ಯನಿರ್ವಹಣೆ ಕುರಿತು ಸಿಬಿಐ ತನಿಖೆಗೆ ಆದೇಶಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಕಳೆದ ಡಿ.6ರಂದು ನಡೆದ ಸಭೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯವು ಈ ಬಗ್ಗೆ ಪ್ರಸ್ತಾಪಿಸಿದ್ದು, ಅಕಾಡೆಮಿಯ ಉನ್ನತ ಹುದ್ದೆಯಲ್ಲಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಖ್ಯಾತ ಕಲಾವಿದ ಎಂ.ಎಫ್.ಹುಸೇನ್ ಸೇರಿದಂತೆ ಅನೇಕರ ಕಲಾಕೃತಿಗಳು ನಾಪತ್ತೆಯಾಗಿರುವುದು ಸೇರಿದಂತೆ ಅಕಾಡೆಮಿಗೆ ಸಂಬಂಧಿಸಿ ಹಲವು ದೂರುಗಳು ಕೇಳಿಬಂದಿದ್ದವು. ಈ ಪ್ರಕರಣದಲ್ಲಿ ಅಕಾಡೆಮಿ ಕಾರ್ಯದರ್ಶಿ ಸುಧಾಕರ್ ಶರ್ಮಾ ಅವರ ಪಾತ್ರವಿರಬಹುದೇ ಎಂಬ ಶಂಕೆಯೂ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಅಕಾಡೆಮಿ ಆಡಳಿತಾಧಿಕಾರಿ ಚಿ.ಸು. ಕೃಷ್ಣಶೆಟ್ಟಿ, “ನಾನು ಅಧಿಕಾರ ಸ್ವೀಕರಿಸಿ 3 ತಿಂಗಳಾಗಿದೆ. ಕಲಾಕೃತಿ ಕಾಣೆಯಾಗಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಇದು 20 ವರ್ಷಗಳ ಹಿಂದಿನ ಪ್ರಕರಣ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು