12 ವರ್ಷಗಳ ಬಳಿಕ ಬೋಫೋರ್ಸ್ ಮರುತನಿಖೆಗೆ ಅನುಮತಿ ಕೋರಿದ CBI!
Team Udayavani, Oct 21, 2017, 12:40 PM IST
ನವದೆಹಲಿ: ದಶಕಗಳ ಹಿಂದಿನ ಬೋಫೋರ್ಸ್ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ 2005ರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹಾಗೂ ಎಫ್ ಐಆರ್ ಅನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಿಕೊಡುವಂತೆ ಸಿಬಿಐ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬಹುಕೋಟಿ ಬೊಫೋರ್ಸ್ ಹಗರಣಕ್ಕೆ ಮತ್ತೆ ಮರುಜೀವ ಬರುವ ಸಾಧ್ಯತೆಯಿದ್ದು, ಪ್ರಕರಣದ ತನಿಖೆಯನ್ನು ಪುನರಾರಂಭ ಮಾಡಲು ಸಿಬಿಐ ಕೇಂದ್ರ ಸರ್ಕಾರದ ಅನುಮತಿ ಕೋರಿದೆ.
ಬೋಫೋರ್ಸ್ ಪ್ರಕರಣದಲ್ಲಿ ಯುರೋಪ್ ಮೂಲದ ಹಿಂದೂಜಾ ಸಹೋದರರ ವಿರುದ್ಧದ ಎಲ್ಲಾ ಆರೋಪವನ್ನು ದೆಹಲಿ ಹೈಕೋರ್ಟ್ 2005ರ ಮೇ 31ರಂದು ವಜಾಗೊಳಿಸಿತ್ತು. ಆ ನಿಟ್ಟಿನಲ್ಲಿ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಎಸ್ ಎಲ್ ಪಿ(ಸ್ಪೆಷಲ್ ಲೀವ್ ಪಿಟಿಷನ್) ಸಲ್ಲಿಸಲು ಅನುಮತಿ ನೀಡುವಂತೆ ಸಿಬಿಐ ಮನವಿ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಅಧಿಕಾರಿಗಳ ಪ್ರಕಾರ, 2005ರಲ್ಲಿ ಸಿಬಿಐ ಬೋಫೋರ್ಸ್ ಪ್ರಕರಣದಲ್ಲಿ ಎಸ್ ಎಲ್ ಪಿ ಸಲ್ಲಿಸಲು ಮುಂದಾಗಿತ್ತು, ಆದರೆ ಅಂದಿನ ಯುಪಿಎ ಸರ್ಕಾರ ಅದಕ್ಕೆ ಅನುಮತಿ ಕೊಟ್ಟಿರಲಿಲ್ಲವಾಗಿತ್ತು ಎಂದು ತಿಳಿಸಿದ್ದಾರೆ. ಏತನ್ಮಧ್ಯೆ ಇದೀಗ ಪ್ರಕರಣದ ಮರುತನಿಖೆ ನಡೆಸಲು ಸುಮಾರು 12 ವರ್ಷಗಳ ಬಳಿಕ ಅನುಮತಿ ಕೋರುತ್ತಿರುವ ಬಗ್ಗೆ ಸಿಬಿಐ ಸುದೀರ್ಘವಾದ ವಿವರಣೆಯನ್ನು ಕೊಡಬೇಕಾದ ಅನಿವಾರ್ಯತೆ ತಲೆದೋರಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?