
ರೆಡ್ ಕಾರ್ನರ್ ನೋಟಿಸ್: ಯಥಾಸ್ಥಿತಿಗೆ ಮನವಿ
ಬೆಳವಣಿಗೆ ವಿರುದ್ಧ ಕಾಂಗ್ರೆಸ್ ಕಿಡಿ
Team Udayavani, Mar 22, 2023, 9:45 PM IST

ನವದೆಹಲಿ: ವಂಚಕ ಮೆಹುಲ್ ಚೋಕ್ಸಿ ವಿರುದ್ಧ ಹೊರಡಿಸಲಾಗಿರುವ ರೆಡ್ ಕಾರ್ನರ್ ನೋಟಿಸ್ ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಸಿಬಿಐ ಇಂಟರ್ಪೋಲ್ಗೆ ಕೋರಿದೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ(ಇಡಿ) ಮನವಿಯ ಮೇರೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13,000 ಕೋಟಿ ರೂ. ವಂಚಿಸಿ ಪರಾರಿಯಾಗಿರುವ ವಜ್ರದ ವ್ಯಾಪಾರಿ ಚೋಕ್ಸಿ ವಿರುದ್ಧ 2018ರಲ್ಲಿ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಸೋಮವಾರ ನಡೆದಿದ್ದ ಬೆಳವಣಿಗೆಯಲ್ಲಿ ಇಂಟರ್ಪೋಲ್ ನೋಟಿಸ್ ರದ್ದು ಮಾಡಿತ್ತು. ಅದನ್ನು ರದ್ದುಗೊಳಿಸುವಂತೆ ಚೋಸ್ಕಿ ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಗೆ ಮನವಿ ಸಲ್ಲಿಸಿದ್ದ.
ಕಾಂಗ್ರೆಸ್ ಕಿಡಿ:
ರೆಡ್ ಕಾರ್ನರ್ ಪಟ್ಟಿಯಿಂದ ಚೋಕ್ಸಿ ಹೆಸರನ್ನು ಇಂಟರ್ಪೋಲ್ ಕೈಬಿಟ್ಟಿರುವ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
“ಇಂಥ ವ್ಯಕ್ತಿಗಳಿಗೆ ರಕ್ಷಣೆ ನೀಡುವವರು ದೇಶಪ್ರೇಮದ ಬಗ್ಗೆ ಮಾತನಾಡುವುದು ಒಂದು ತಮಾಷೆಯಾಗಿದೆ,’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೂರಿದ್ದಾರೆ. ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ “ಪ್ರತಿಪಕ್ಷಗಳಿಗೆ ಮಾತ್ರ ಇಡಿ, ಸಿಬಿಐ. ಆದರೆ ಸ್ನೇಹಿತರಿಗೆ ಮಾತ್ರ ಬಿಟ್ಟುಬಿಡು. ಮೊದಲು ಲೂಟಿ ಮಾಡು, ನಂತರ ಶಿಕ್ಷಯಿಲ್ಲದೇ ಪರಾರಿಯಾಗು ಎಂಬುದು ಮೋದಿ ಮಾಡೆಲ್ ಆಗಿದೆ,’ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
