ಚಿದಂಬರಂ ಕಸ್ಟಡಿ ಒಂದು ದಿನ ವಿಸ್ತರಣೆ
Team Udayavani, Sep 2, 2019, 6:25 PM IST
ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಪ್ರಕರಣದಲ್ಲಿ ವಿಚಾರಣೆಗಾಗಿ ಸಿಬಿಐ ವಶದಲ್ಲಿರುವ ಮಾಜೀ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಕಸ್ಟಡಿಯನ್ನು ಇನ್ನೂ ಒಂದು ದಿನಕ್ಕೆ ವಿಸ್ತರಿಸಲಾಗಿದೆ.
ಚಿದಂಬರಂ ಅವರ ವಿಚಾರಣೆಗೆ ಇನ್ನೂ ಒಂದು ದಿನದ ಕಾಲಾವಕಾಶ ಬೇಕು ಎಂಬ ಸಿಬಿಐ ಮನವಿಯನ್ನು ಪುರಸ್ಕರಿಸಿದ ದೆಹಲಿ ನ್ಯಾಯಾಲಯವು ಸೋಮವಾರದಂದು ಈ ಆದೇಶವನ್ನು ನೀಡಿದೆ.
ಸಿಬಿಐ ಮತ್ತು ಚಿದಂಬರಂ ಅವರ ವಕೀಲರ ವಾದಗಳನ್ನು ಆಲಿಸಿದ ಬಳಿಕ ವಿಶೇಷ ನ್ಯಾಯಾಧೀಶರಾಗಿರುವ ಅಜಯ್ ಕುಮಾರ್ ಕುಹಾರ್ ಅವರು ಈ ಆದೇಶವನ್ನು ನೀಡಿದ್ದಾರೆ. ಆಗಸ್ಟ್ 30ರಂದು ಚಿದಂಬರಂ ಅವರನ್ನು ವಿಚಾರಣೆಗಾಗಿ ಸಿಬಿಐ ವಶಕ್ಕೆ ಒಪ್ಪಿಸಲಾಗಿತ್ತು. ಅವರ ಮೂರು ದಿನಗಳ ಸಿಬಿಐ ಕಷ್ಟಡಿ ಇಂದು ಅಂತ್ಯಗೊಂಡ ಕಾರಣ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು