ಕೋವಿಡ್ 19 : ದ್ವಿತೀಯ ಪಿಯುಸಿ ಪರೀಕ್ಷೆಗಳು ರದ್ದು : ಕೇಂದ್ರ ಸರ್ಕಾರ
Team Udayavani, Jun 1, 2021, 8:36 PM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ದೇಶದಲ್ಲಿ ಕೋವಿಡ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ಸಾಲಿನ ಸಿಬಿ ಎಸ್ ಇ 1 ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಕಳೆದ ವರ್ಷದಂತೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಇಚ್ಛಿಸಿದರೆ, ಸಿಬಿಎಸ್ಇ ಅವರಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸುತ್ತದೆ. ಆದರೆ, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪರೀಕ್ಷೆ ನಡೆಸುವುದು ಸಾಧ್ಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ : ಮೀನುಗಾರರು, ನೇಕಾರರು, ಸಣ್ಣ ಉದ್ಯೋಗಿಗಳಿಗೆ ಪರಿಹಾರ ಒದಗಿಸಿ : ಸಿಎಂಗೆ ಮೆಂಡನ್ ಮನವಿ
ಕೋವಿಡ್ ಗಂಭೀರ ಸ್ಥಿತಿಯ ನಡುವೆ ಪರೀಕ್ಷೆ ನಡೆಸುವ ವಿಚಾರವಾಗಿ ಪರ ವಿರೋಧ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು(ಮಂಗಳವಾರ, ಜೂನ್ 1) ತಜ್ಞರು ಹಾಗೂ ಅಧಿಕಾರಗಳ ಸಭೆ ನಡೆಸಲಾಯಿತು.
ಉನ್ನತ ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರು ಇದ್ದ ಸಭೆಯಲ್ಲಿ ಪರೀಕ್ಷೆ ಬೇಕೋ ಬೇಡವೋ ಎನ್ನುವುದರ ಬಗ್ಗೆ ಚರ್ಚೆ ನಡೆಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಪಡಿಸುವ ನಿರ್ಧಾರಕ್ಕೆ ಬಂದಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತ ಸರ್ಕಾರವು ದ್ವಿತೀಯ ಪಿಯುಸಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದು ಪಡಿಸಲು ನಿರ್ಧರಿಸಿದೆ. ಸಾಕಷ್ಟು ಸಲಹೆಗಳನ್ನು ಪಡೆದ ಬಳಿಕ ನಾವು ವಿದ್ಯಾರ್ಥಿ ಸ್ನೇಹಿ ತೀರ್ಮಾನವನ್ನು ಕೈಗೊಂಡಿದ್ದೇವೆ. ನಮ್ಮ ಯುವ ಸಮೂಹದ ಭವಿಷ್ಯ ಹಾಗೂ ಆರೋಗ್ಯವನ್ನು ಕಾಪಾಡುವಂತಹ ನಿರ್ಧಾರ ಇದಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.
Government of India has decided to cancel the Class XII CBSE Board Exams. After extensive consultations, we have taken a decision that is student-friendly, one that safeguards the health as well as future of our youth. https://t.co/vzl6ahY1O2
— Narendra Modi (@narendramodi) June 1, 2021
ಇದನ್ನೂ ಓದಿ : ಮೂರನೇ ಅಲೆ ತಡೆಗೆ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ: ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ