CBSE 10ನೇ ತರಗತಿ ಗಣಿತ ಪುನರ್ ಪರೀಕ್ಷೆ ಇಲ್ಲ: ಭಾರೀ ರಿಲೀಫ್
Team Udayavani, Apr 3, 2018, 3:52 PM IST
ಹೊಸದಿಲ್ಲಿ : ಸಿಬಿಎಸ್ಇ 10ನೇ ತರಗತಿಯ ಗಣಿತ ಪರೀಕ್ಷೆಯನ್ನು ಪುನರಪಿ ನಡೆಸಲಾಗುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದ್ದು ಆ ಮೂಲಕ ಸಹಸ್ರಾರು ವಿದ್ಯಾರ್ಥಿಗಳಿಗೆ ಭಾರೀ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಕಳೆದ ಮಾರ್ಚ್ 28ರಂದು ಸಿಬಿಎಸ್ಇ 10ನೇ ತರಗತಿ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು.
“ಸಹಸ್ರಾರು ವಿದ್ಯಾರ್ಥಿಗಳ ಪರಮೋಚ್ಚ ಹಿತಾಸಕ್ತಿಯನ್ನು ಕಾಪಿಡುವ ಸಲುವಾಗಿ ಸಿಬಿಎಸ್ಇ 10ನೇ ತರಗತಿ ಗಣಿತ ಪರೀಕ್ಷೆಯನ್ನು ದಿಲ್ಲಿ ಎನ್ಸಿಆರ್ ಮತ್ತು ಹರಿಯಾಣದಲ್ಲಿ ಕೂಡ ಪುನರಪಿ ನಡಸದಿರಲು ನಿರ್ಧರಿಸಲಾಗಿದೆ’ ಎಂದು ಭಾರತ ಸರಕಾರದ ಶಿಕ್ಷಣ ಕಾರ್ಯದರ್ಶಿ ಅನಿಲ್ ಸ್ವರೂಪ್ ತಿಳಿಸಿದರು.
ಇದಕ್ಕೆ ಮೊದಲು ಸಿಬಿಎಸ್ಇ ಪುನರ್ ಪರೀಕ್ಷೆ ಬಗೆಗಿನ ಅರ್ಜಿಗಳ ಮೇಲಿನ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ವಿಷಯವನ್ನು ಎ.4ರಂದು ಪುನಃ ವಿಚಾರಣೆ ಎತ್ತಿಕೊಳ್ಳಲಾಗುವುದು ಎಂದು ಹೇಳಿತ್ತು.
ಆದರೆ ಈ ನಡುವೆ ಸಿಬಿಎಸ್ಇ 10ನೇ ಗಣಿತ ಪರೀಕ್ಷೆಯನ್ನು ಪುನರಪಿ ನಡೆಸದಿರುವ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡು ಸಹಸ್ರಾರು ವಿದ್ಯಾರ್ಥಿಗಳಿಗೆ ಭಾರೀ ದೊಡ್ಡ ರಿಲೀಫ್ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು