ಜು.1-15ರ ವರೆಗೆ ನಡೆಯಲಿದೆ ಸಿಬಿಎಸ್ಇ ಬಾಕಿ ಪರೀಕ್ಷೆ
ಆಗಸ್ಟ್ ಅಂತ್ಯಕ್ಕೆ ಫಲಿತಾಂಶ ಪ್ರಕಟ ಸಾಧ್ಯತೆ; ಕೋವಿಡ್-19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪರೀಕ್ಷೆ
Team Udayavani, May 8, 2020, 7:17 PM IST
ಸಾಂದರ್ಭಿಕ ಚಿತ್ರ.
ನವದೆಹಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯ 10, 12ನೇ ತರಗತಿಯ ಬಾಕಿ ಉಳಿದ 29 ವಿಷಯಗಳಲ್ಲಿನ ಪರೀಕ್ಷೆಗಳನ್ನು ಜು.1-15ರ ನಡುವೆ ನಡೆಸಲಾಗುತ್ತದೆ. ಆಗಸ್ಟ್ ಅಂತ್ಯದ ಒಳಗಾಗಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಶುಕ್ರವಾರ ನವದೆಹಲಿಯಲ್ಲಿ ಪ್ರಕಟಿಸಿದ್ದಾರೆ.
ಐಐಟಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳಿಗೆ ನಡೆಯುವ ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ ಜು.18-23ರ ನಡುವೆ ನಡೆಯಲಿದೆ. ಅದಕ್ಕೆ ಮೊದಲು ಬಾಕಿ ಉಳಿದಿರುವ ಪರೀಕ್ಷೆ ನಡೆಸಲು ಸಿಬಿಎಸ್ಇ ತೀರ್ಮಾನಿಸಿದೆ.
ದೇಶದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಾಗಿದ್ದರಿಂದ ಬಾಕಿ ಉಳಿದಿರುವ ಪರೀಕ್ಷೆ ಮುಂದೂಡಲಾಗಿತ್ತು.
ಟೀವಿ ಪಾಠಕ್ಕೆ 12 ಹೊಸ ಚಾನಲ್: ಒಂದೂವರೆ ತಿಂಗಳಿನಿಂದ ಮನೆಯಲ್ಲೇ ಕುಳಿತು, ಶಾಲೆ ಯಾವಾಗ ಶುರುವಾಗುತ್ತೆ ಎಂದು ಕಾಯುತ್ತಾ ಕುಳಿತಿರುವ ವಿದ್ಯಾರ್ಥಿಗಳ ನೆರವಿಗೆ ಧಾವಿಸಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಸದ್ಯದಲ್ಲೇ 12 ಹೊಸ ಡೈರೆಕ್ಟ್-ಟು-ಹೋಮ್ (ಡಿಟಿಎಚ್) ಚಾನಲ್ಗಳನ್ನು ಆರಂಭಿಸಲು ನಿರ್ಧರಿಸಿದೆ. ಇಲ್ಲಿ ಒಂದೊಂದು ಚಾನಲ್ ಒಂದೊಂದು ತರಗತಿಗೆ ಮೀಸಲಿರಲಿದೆ ಎಂದು ಸಚಿವಾಲಯ ತಿಳಿಸಿದೆ.
ಈಗಾಗಲೇ ಆನ್ ಲೈನ್ ಮೂಲಕ ಪಾಠ ನಡೆಯುತ್ತಿದ್ದರೂ ಅಂತರ್ಜಾಲ ಸಂಪರ್ಕದ ಅಲಭ್ಯತೆ ಮತ್ತು ನಿಧಾನ ಗತಿಯ ಇಂಟರ್ನೆಟ್ನಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದು ತಲುಪುತ್ತಿಲ್ಲ. ಹೀಗಾಗಿ ಒನ್ ಕ್ಲಾಸ್, ಒನ್ ಚಾನಲ್ ಯೋಜನೆ ಆರಂಭಿಸಲಾಗಿದೆ. ಪ್ರತಿಯೊಂದು ಚಾನಲ್ನಲ್ಲಿ ಏನೇನು ವಿಷಯ ಇರಬೇಕೆಂದು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಲಿದೆ. ಜತೆಗೆ ವಿಷಯ ಅಭಿವೃದ್ಧಿಪಡಿಸಲು ಎನ್ಸಿಇಆರ್ಟಿ ಮತ್ತು ಸಿಬಿಎಸ್ಇ ಸಂಸ್ಥೆಗಳ ತಜ್ಞರ ನೆರವು ಪಡೆಯಲು ಇಲಾಖೆ ಚಿಂತನೆ ನಡೆಸಿದೆ.
1ರಿಂದ 12ನೇ ತರಗತಿಗೆ ಮೀಸಲಾಗಿರುವ ಈ ಚಾನಲ್ಗಳು ಉಚಿತವಾಗಿರಲಿದ್ದು, ಇವು ಆರಂಭವಾದ ಬಳಿಕ ಕೇಬಲ್ ಆಪರೇಟರ್ಗೆ ತಿಳಿಸಿ, ಚಾನಲ್ ಸಂಪರ್ಕ ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ