ಅಕ್ರಮ ಹಣಕಾಸು ವರ್ಗಾವಣೆ ಕೇಸ್; ರಾಬರ್ಟ್ ವಾದ್ರಾ ನಿಕಟವರ್ತಿ ಉದ್ಯಮಿ 4 ದಿನ E.D ಕಸ್ಟಡಿಗೆ
Team Udayavani, Jan 24, 2020, 6:28 PM IST
ನವದೆಹಲಿ: ಸೋನಿಯಾ ಗಾಂಧಿ ಅಳಿಯ, ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಶಾಮೀಲಾಗಿರುವ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ್ರಾ ನಿಕಟವರ್ತಿ, ದುಬೈ ಮೂಲದ ಉದ್ಯಮಿ ಸಿಸಿ ಥಾಂಪಿಯನ್ನು ಕೋರ್ಟ್ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೊಪ್ಪಿಸಿರುವುದಾಗಿ ವರದಿ ತಿಳಿಸಿದೆ.
ಅಕ್ರಮ ಹಣಕಾಸು ಪ್ರಕರಣದಲ್ಲಿ ತನಿಖೆ ನಡೆಸುವುದು ಇನ್ನೂ ಬಾಕಿ ಇದೆ. ಅಲ್ಲದೇ ಹೆಚ್ಚಿನ ಸಾಕ್ಷಿಗಳನ್ನು ತನಿಖೆಗೆ ಒಳಪಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಥಾಂಪಿಯನ್ನು ಕಸ್ಟಡಿಗೆ ಒಪ್ಪಿಸಬೇಕೆಂದು ಇ.ಡಿ ಅಧಿಕಾರಿಗಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು.
ನನ್ನ ಕಕ್ಷಿದಾರ (ಥಾಂಪಿ) ಕಳೆದ ಒಂದು ವಾರದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶದಲ್ಲಿದ್ದರು. ಹೀಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವ ಅಗತ್ಯವಿಲ್ಲ. ಈಗಾಗಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಥಾಂಪಿ ಪರ ಹಿರಿಯ ವಕೀಲ ರಾಜು ರಾಮಚಂದ್ರನ್ ಪ್ರತಿವಾದ ಮಂಡಿಸಿದ್ದರು.
ಥಾಂಪಿ ಜಾಮೀನು ಅರ್ಜಿ ಇಂದು ಸಿಬಿಐ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ಜಾರಿ ನಿರ್ದೇಶನಾಲಯ ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿತ್ತು.
ರಾಬರ್ಟ್ ವಾದ್ರಾ ನಿಕಟವರ್ತಿಯಾಗಿದ್ದ ಥಾಂಪಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜನವರಿ 20ರಂದು ಬಂಧಿಸಿದ್ದರು. ಥಾಂಪಿ ಹಾಗೂ ಆತನ ಹಾಲಿಡೇ ಸಿಟಿ ಸೆಂಟರ್, ಹಾಲಿಡೇ ಪ್ರಾಪರ್ಟೀಸ್ ಮತ್ತು ಹಾಲಿಡೇ ಬೇಕಲ್ ರೆಸಾರ್ಟ್ಸ್ ಕುರಿತು ಇ.ಡಿ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್