ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತಕ್ಕೆ ಪ್ರತಿಕೂಲ ಹವಾಮಾನವೇ ಕಾರಣ!
Team Udayavani, Jan 14, 2022, 10:30 PM IST
ನವದೆಹಲಿ: ಕಳೆದ ಡಿ.28ರಂದು ತಮಿಳುನಾಡಿನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ಹಾಗೂ ಇತರೆ 13 ಮಂದಿಯ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದ ಪ್ರಾಥಮಿಕ ತನಿಖೆಯ ವರದಿಯನ್ನು ಶುಕ್ರವಾರ ಸಲ್ಲಿಸಲಾಗಿದೆ.
“ಕಾಪ್ಟರ್ನಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ, ಇದು ನಿರ್ಲಕ್ಷ್ಯದಿಂದಾದ ಅವಘಡವೂ ಅಲ್ಲ, ವಿಧ್ವಂಸಕ ಕೃತ್ಯವೂ ಅಲ್ಲ. ಅನಿರೀಕ್ಷಿತವಾಗಿ ಎದುರಾದ ಪ್ರತಿಕೂಲ ಹವಾಮಾನದಿಂದಾಗಿಯೇ ಈ ದುರಂತ ಸಂಭವಿಸಿತು’ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:75 ಲಕ್ಷ ಮಂದಿಯಿಂದ ಸೂರ್ಯ ನಮಸ್ಕಾರ
ಸೇನೆಯ ಮೂರೂ ಪಡೆಗಳು ಕೋರ್ಟ್ ಆಫ್ ಎಂಕ್ವೆರಿ ನಡೆಸಿ ಈ ಅಧಿಕೃತ ವರದಿಯನ್ನು ನೀಡಿದೆ. ಹೆಲಿಕಾಪ್ಟರ್ನ ಡೇಟಾ ರೆಕಾರ್ಡರ್, ಕಾಕ್ಪಿಟ್ ವಾಯ್ಸ ರೆಕಾರ್ಡರ್, ಎಲ್ಲ ಲಭ್ಯ ಸಾಕ್ಷ್ಯಗಳನ್ನು ವಿಶ್ಲೇಷಿಸಿ ಈ ವರದಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್