ಗಡಿಯಲ್ಲಿ ಮತ್ತೆ ಪಾಕ್ ಕದನ ವಿರಾಮ ಉಲ್ಲಂಘನೆ
Team Udayavani, Mar 14, 2017, 3:50 AM IST
ಜಮ್ಮು: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ಥಾನ ಪಡೆಗಳು ಕೇವಲ 24 ಗಂಟೆಗಳ ಅವಧಿಯೊಳಗೆ ಎರಡನೇ ಬಾರಿ ಕದನ ವಿರಾಮ ಉಲ್ಲಂಸಿವೆ. ಜಮ್ಮು ಮತ್ತು ಕಾಶ್ಮೀರದ ಪೂಂಛ… ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸೋಮವಾರ ಪಾಕಿಸ್ಥಾನ ಪಡೆಗಳು ಶೆಲ್ ಹಾಗೂ ಸ್ವಯಂ ಚಾಲಿತ ಆಯುಧಗಳ ಮೂಲಕ ಗುಂಡಿನ ದಾಳಿ ನಡೆಸಿವೆ.
“”ಪೂಂಛ… ವಲಯದಲ್ಲಿ ಬೆಳಗ್ಗೆ 6.40ರಿಂದಲೂ ಪಾಕ್ ಪಡೆಗಳು 82 ಎಂಎಂ ಫಿರಂಗಿ ಹಾಗೂ ಸ್ವಯಂಚಾಲಿತ ಆಯುಧಗಳ ಮೂಲಕ ದಾಳಿ ನಡೆಸುತ್ತಿವೆ. ಭಾರತ ಯೋಧರು ಕೂಡ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ,” ಎಂದು ರಕ್ಷಣಾ ವಿಭಾಗದ ವಕ್ತಾರರೊಬ್ಬರು ತಿಳಿಸಿದ್ದಾರೆ.
“”ನಮ್ಮ ಪ್ರತಿ ಹಬ್ಬದ ಸಂದರ್ಭದಲ್ಲೂ ಗಡಿ ನಿಯಂತ್ರಣ ರೇಖೆಯಲ್ಲಿ ಗುಂಡಿನ ದಾಳಿ ನಡೆಸುವುದು ಪಾಕಿಸ್ಥಾನದ ಹಳೇ ಚಾಳಿ,” ಎಂದು ಬಿಜೆಪಿ ಮುಖಂಡ ರಾಜ್ಯವರ್ಧನ್ ಸಿಂಗ್ ರಾಥೋಡ್ ಕಿಡಿಕಾರಿದ್ದಾರೆ. ಹೋಳಿ ಸಂದರ್ಭದಲ್ಲಿ ಕದನ ವಿರಾಮ ಉಲ್ಲಂ ಸಿರುವ ಪಾಕಿಸ್ಥಾನದ ಕ್ರಮವನ್ನು ಖಂಡಿಸಿರುವ ರಾಥೋಡ್, “”ಪಾಕಿಸ್ಥಾನ ಭಾರತದ ಶಾಂತಿ ಕದಡಲು ಯತ್ನಿಸುತ್ತಿದೆ,” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.