ವಾಟ್ಸ್‌ಆ್ಯಪ್‌ಗೆ ಕನ್ನ: ಸ್ಪಷ್ಟೀಕರಣ ಕೇಳಿದ ಕೇಂದ್ರ ಸರಕಾರ

ಇಸ್ರೇಲ್‌ನ ಸ್ಪೈವೇರ್‌ ಮೂಲಕ 1400 ಮಂದಿ ವಾಟ್ಸ್‌ಆ್ಯಪ್‌ ಮಾಹಿತಿ ಸೋರಿಕೆ

Team Udayavani, Oct 31, 2019, 7:42 PM IST

whats-app

ಹೊಸದಿಲ್ಲಿ: ಕಳೆದ ಲೋಕಸಭೆ ಚುನಾವಣೆ ವೇಳೆ ವಾಟ್ಸ್‌ಆ್ಯಪ್‌ಗೆ ಕನ್ನ ಕೊರೆದು ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ನಡೆಸಿದ್ದ ಚಾಟಿಂಗ್‌ ಮಾಹಿತಿಯನ್ನು ಕದಿಯಲಾಗಿದೆ ಎಂಬ ವಿಚಾರ ಈಗ ದೊಡ್ಡ ಸುದ್ದಿ ಮಾಡಿದೆ.
ಈ ಸಂಬಂಧ ಕೇಂದ್ರ ಸರಕಾರ ವಾಟ್ಸ್‌ಆ್ಯಪ್‌ಗೆ ನೋಟಿಸ್‌ ಜಾರಿ ಮಾಡಿದ್ದು, ನ.4ರೊಳಗೆ ಉತ್ತರಿಸುವಂತೆ ಹೇಳಿದೆ.

ಇಸ್ರೇಲ್‌ನ ಸರಕಾರೇತರ ಸರ್ವೇಕ್ಷಣಾ ಸಂಸ್ಥೆಯೊಂದು ಪೆಗಸಸ್‌ ಹೆಸರಿನ ಸ್ಪೈವೇರ್‌ ಮೂಲಕ ವಾಟ್ಸ್‌ಆ್ಯಪ್‌ಗೆ ಕನ್ನ ಹಾಕಿದ್ದು, ಅದು ಸುಮಾರು 1400 ಬಳಕೆದಾರರ ಚಾಟಿಂಗ್‌ ಮಾಹಿತಿಗಳನ್ನು ಕದಿಯಲಾಗಿದೆ, ಇವುಗಳಲ್ಲಿ ಹೆಚ್ಚಿನವು ವೀಡಿಯೋ ಚಾಟಿಂಗ್‌ ಮಾಹಿತಿಗಳಾಗಿವೆ ಎಂದು ಎಂದು ಸ್ವತಃ ವಾಟ್ಸ್‌ಆ್ಯಪ್‌ ಕನ್ನಕೊರೆದ ಸಂಗತಿಯನ್ನು ಹೇಳಿತ್ತು.

ಜತೆಗೆ ಇಸ್ರೇಲ್‌ನ ಆ ಸಂಸ್ಥೆಗೆ ನೋಟಿಸ್‌ ಜಾರಿಗೊಳಿಸಿದ್ದಾಗಿ ಹೇಳಿತ್ತು. ಮಾಹಿತಿ ಕಳವಿಗೆ ಒಳಗಾದವರಲ್ಲಿ ಭಾರತದ ರಾಜಕಾರಣಿಗಳು, ಪತ್ರಕರ್ತರು, ಸರಕಾರದ ಹಿರಿಯ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ 20ದೇಶದ ವ್ಯಕ್ತಿಗಳಿದ್ದಾರೆ. ಸುಮಾರು ಎರಡು ವಾರಗಳ ಕಾಲ ಏಪ್ರಿಲ್‌ ತಿಂಗಳ ಕೊನೆಯವರೆಗೆ ಮಾಹಿತಿ ಕಳವು ಮಾಡಲಾಗಿತ್ತು.

ಪ್ರಕರಣ ಕುರಿತಾಗಿ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಅವರು ಮಾತನಾಡಿ, ಈ ಬಗ್ಗೆ ವಾಟ್ಸ್‌ಆ್ಯಪ್‌ ಸ್ಪಷ್ಟನೆ ನೀಡುವಂತೆ ಕೇಳಲಾಗಿದೆ. ಅಲ್ಲದೇ ಕೋಟ್ಯಂತರ ಮಂದಿ ಭಾರತೀಯರ ಮಾಹಿತಿ ರಕ್ಷಣೆಗೆ ಏನು ಮಾಡಲಾಗಿದೆ ಎಂದು ಸ್ಪಷ್ಟೀಕರಣ ಬಯಸಿದ್ದೇವೆ ಎಂದು ಹೇಳಿದ್ದಾರೆ.

ಆದರೆ ಅತ್ತ ಇಸ್ರೇಲ್‌ನ ಕಂಪೆನಿ ಈ ಬಗ್ಗೆ ನಿರಾಕರಣೆ ಮಾಡಿದೆ. ನಮ್ಮ ತಂತ್ರಜ್ಞಾನ ಯಾವುದೇ ಮಾನವಹಕ್ಕು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರ ವಿರುದ್ಧ ಮಾಡಿದ್ದಲ್ಲ. ಇದು ಪರವಾನಿಗೆ ಹೊಂದಿರುವುದು ಸರಕಾರಿ ಸಂಸ್ಥೆಗಳು ಬಳಸಲು ಮಾತ್ರ ವಿಶೇಷವಾಗಿ ಭಯೋತ್ಪಾದನೆ, ಹಿಂಸೆ ವಿಚಾರಗಳನ್ನು ತಡೆಯುವ ಉದ್ದೇಶವನ್ನಷ್ಟೇ ಹೊಂದಿದೆ ಎಂದು ಹೇಳಿದೆ.
ಇದರೊಂದಿಗೆ ಇಸ್ರೇಲ್‌ ಕಂಪೆನಿ ವಿರುದ್ಧ ಸುಮಾರು 53 ಲಕ್ಷ ನಷ್ಟ ಪರಿಹಾರವನ್ನು ಕ್ಯಾಲಿಫೋರ್ನಿಯಾ ಕೋರ್ಟ್‌ನಲ್ಲಿ ವಾಟ್ಸ್‌ಆ್ಯಪ್‌ ಕೇಳಿದೆ. ವಾಟ್ಸ್‌ಆ್ಯಪ್‌ಗೆ 150 ಕೋಟಿ ಮಂದಿ ಗ್ರಾಹಕರಿದ್ದು ಭಾರತದಲ್ಲಿ 4 ಕೋಟಿ ಮಂದಿ ಗ್ರಾಹಕರಿದ್ದಾರೆ.

ಕಾಂಗ್ರೆಸ್‌ ಟೀಕೆ
ಇದೇ ವೇಳೆ ವಾಟ್ಸ್‌ಆ್ಯಪ್‌ ಮಾಹಿತಿ ಕಳವು ವಿಚಾರದಲ್ಲಿ ಕಾಂಗ್ರೆಸ್‌ ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದೆ. ಮೋದಿ ಸರಕಾರ ಮಾಹಿತಿ ಕಳವು ಮಾಡಿದ್ದು ಸಿಕ್ಕಿಬಿದ್ದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಇತ್ತೀಚಿಗೆ ಸರಕಾರ ನಮ್ಮ ಖಾಸಗಿ ಹಕ್ಕುಗಳ ವಿರುದ್ಧ ವಾದ ಮಾಡಿದ್ದು, ಮಾಹಿತಿ ಕದಿವ ವ್ಯವಸ್ಥೆಯನ್ನು ಕೋಟ್ಯಂತರ ರೂ. ವೆಚ್ಚದಲ್ಲಿ ಅನುಷ್ಠಾನ ಮಾಡಿತ್ತು. ಆದರೆ ಇದಕ್ಕೆ ಸುಪ್ರೀಂ ತಡೆ ನೀಡಿದೆ. ಆದ್ದರಿಂದ ಸುಪ್ರೀಂ ಕೋರ್ಟ್‌ ಕೂಡಲೇ ಮಧ್ಯ ಪ್ರವೇಶಿಸಿ ಬಿಜೆಪಿ ಸರಕಾರದ ವಿರುದ್ಧ ನೋಟಿಸ್‌ ಜಾರಿ ಮಾಡಬೇಕು ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇìವಾಲ ಟ್ವೀಟ್‌ ಮಾಡಿದ್ದಾರೆ.

ಏನಿದು ಸ್ಪೈವೇರ್‌
ವಾಟ್ಸ್‌ಆ್ಯಪ್‌ ಮಾಹಿತಿಯನ್ನು ಕದಿಯಲು ಅಭಿವೃದ್ಧಿ ಪಡಿಸಿದ ವೈರಸ್‌ ರೀತಿಯದ್ದು. ಇದನ್ನು ಸ್ಪೈವೇರ್‌ ಎಂದು ಕರೆಯುತ್ತಾರೆ. ಬಳಕೆದಾರ ವೀಡಿಯೋ ಕಾಲ್‌ ರಿಸೀವ್‌ ಮಾಡಿದ ಕೂಡಲೇ ಈ ಸ್ಪೈವೇರ್‌ ಆ್ಯಕ್ಟಿವೇಟ್‌ ಆಗಿ ಅದು ಮಾಹಿತಿ ಕದಿಯುವಾತನಿಗೆ ಸಂಪರ್ಕ ಏರ್ಪಡಿಸುತ್ತದೆ. ಬಳಕೆದಾರ ಕಾಲ್‌ ರಿಸೀವ್‌ ಮಾಡದಿದ್ದರೂ, ಆತನ ಫೋನ್‌ನಲ್ಲಿರುವ ಸಂಪರ್ಕ ಸಂಖ್ಯೆಗಳು, ವಾಟ್ಸ್‌ಆ್ಯಪ್‌ ಮಾಹಿತಿ, ಕ್ಯಾಲೆಂಡರ್‌, ಪಾಸ್‌ವರ್ಡ್‌, ಕಾಂಟ್ಯಾಕ್ಟ್ ಲಿಸ್ಟ್‌ಗಳ ಮಾಹಿತಿಯನ್ನು ಪಡೆಯಲು ನೆರವು ನೀಡುತ್ತದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.