ಚಿಲ್ಲರೆ ವ್ಯಾಪಾರಿಗಳಿಗೆ ಕೇಂದ್ರದಿಂದ ಪರಿಹಾರ ಪ್ಯಾಕೇಜ್?
Team Udayavani, May 9, 2020, 10:39 PM IST
ಹೊಸದಿಲ್ಲಿ: ಸಣ್ಣ ಚಿಲ್ಲರೆ ವ್ಯಾಪಾರಿಗಳಿಗೆ ಪರಿಹಾರ ಪ್ಯಾಕೇಜ್ ನೀಡಲು ಕೇಂದ್ರ ಸರಕಾರ ಚಿಂತಿಸುತ್ತಿದೆ.
7 ಕೋಟಿಗೂ ಅಧಿಕ ಸಣ್ಣ ವ್ಯಾಪಾರಿಗಳನ್ನು ಪ್ರತಿನಿಧಿಸುವ ಸಿಎಐಟಿ ಕೆಲವು ದಿನಗಳ ಹಿಂದೆ ಕೇಂದ್ರ ಸರಕಾರದ ಮುಂದೆ ಪ್ರಮುಖ ಬೇಡಿಕೆಗಳನ್ನು ಇಟ್ಟಿತ್ತು.
ವಿಶೇಷ ಬಡ್ಡಿದರದಲ್ಲಿ ಬ್ಯಾಂಕ್ ಸಾಲ, ವ್ಯಾಪಾರಿ ಮತ್ತು ಉದ್ಯೋಗಿಗಳಿಗೆ ಸರಕಾರಿ ಬೆಂಬಲಿತ ವಿಮೆ, ವೇತನಾ ಸಂರಕ್ಷಣಾ ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿತ್ತು. ವ್ಯಾಪಾರಿಗಳ ಸಮಸ್ಯೆ ಅವಲೋಕಿಸಿ ಕೇಂದ್ರ ಸರಕಾರ ಅಗತ್ಯ ಪ್ಯಾಕೇಜ್ ರೂಪಿಸಲು ಸಜ್ಜಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖೀಸಿ ‘ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಕಳೆದ ವರ್ಷ ಜಾರಿಮಾಡಿದ್ದ ಸಣ್ಣ ವ್ಯಾಪಾರಿಗಳ ಪಿಂಚಣಿ ಯೋಜನೆಯನ್ನೂ ಸರಕಾರ ಪರಿಷ್ಕರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 1.5 ಕೋಟಿ ರೂ.ಗಿಂತ ಕಡಿಮೆ ಆದಾಯವುಳ್ಳ ಸಣ್ಣ ಚಿಲ್ಲರೆ ವ್ಯಾಪಾರಿಗಳು, 60 ವರ್ಷ ದಾಟಿದ ಅನಂತರ 3000 ರೂ. ಪಿಂಚಣಿ ಪಡೆಯುವ ಈ ಯೋಜನೆ ಪರಿಷ್ಕರಣೆಗೊಳ್ಳುವ ಸಂಭವವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ