ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ
ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನಕ್ಕೆ ಒತ್ತು ನೀಡಲು ನಿರ್ಧಾರ
Team Udayavani, Oct 21, 2021, 5:45 AM IST
ನವದೆಹಲಿ: ಪ್ರತಿಯೊಬ್ಬ ನಾಗರಿಕರ ಜನನ ಪ್ರಮಾಣ ಪತ್ರ, ನಾನಾ ಯೋಜನೆಗಳ ಪ್ರಮಾಣಪತ್ರಗಳು ಒಂದೇ ವೇದಿಕೆಯಲ್ಲಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಹೊಸ ವ್ಯವಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರ್ಕಾರ 60 ಅಂಶಗಳ ಕಾರ್ಯಸೂಚಿಯನ್ನು ನಿರ್ಧರಿಸಿರುವ ಬೆನ್ನಲ್ಲೇ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉಪಲಬ್ಧತೆಯನ್ನು ಗಣನೀಯವಾಗಿ ಹೆಚ್ಚಿಸಲು ಮತ್ತೊಂದು ಹೆಜ್ಜೆ ಇಡಲಾಗಿದೆ.
ಒಟ್ಟಾರೆ ದೇಶೀಯ ಉತ್ಪಾದನೆಗೆ (ಜಿಡಿಪಿ) ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದ ಬರುತ್ತಿರುವ ದೇಣಿಗೆಯನ್ನು ಗಣನೀಯವಾಗಿ ಹೆಚ್ಚಿಸಲು, ಆ ಕ್ಷೇತ್ರದಲ್ಲಿ ತ್ವರಿತ ನಿರ್ಧಾರ, ತ್ವರಿತ ಅನುಷ್ಠಾನ, ಪರಿಣಾಮಕಾರಿ ಆಡಳಿತವನ್ನು ನೀಡುವುದು ಹಾಗೂ ಹೊಸ ಸ್ಟಾರ್ಟ್ ಅಪ್ ಗಳ ಬೆಳವಣಿಗೆಗಳಿಗೆ ಮತ್ತಷ್ಟು ಪೂರಕವಾದ ವಾತಾವರಣವನ್ನು ಒದಗಿಸಲು ತೀರ್ಮಾನಿಸಲಾಗಿದೆ.
ಹೆಚ್ಚೆಚ್ಚು ಸಂಗ್ರಹವಾಗಿರುವ ದತ್ತಾಂಶ ಕ್ರೋಢೀಕರಣವನ್ನು ವಿವಿಧ ಯೋಜನೆಗಳಲ್ಲಿ, ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಧಾನ ಮಾಹಿತಿ ಅಧಿಕಾರಿಗಳನ್ನು (ಸಿಐಒ) ಹಾಗೂ ಮುಖ್ಯ ತಾಂತ್ರಿಕ ಅಧಿಕಾರಿಗಳನ್ನು (ಸಿಟಿಒ) ನೇಮಿಸಲು ನಿರ್ಧರಿಸಲಾಗಿದೆ.
ಈ ಮೂಲಕ, ಈ ಕ್ಷೇತ್ರದಲ್ಲಿ ಬಂಡವಾಳ ಹೂಡುವ ಪ್ರತಿಯೊಬ್ಬರಿಗೂ ಸರ್ಕಾರ ಯೋಜನೆಗಳು, ಸವಲತ್ತುಗಳು ತ್ವರಿತವಾಗಿ, ಕ್ರಮಬದ್ಧವಾಗಿ ಸಿಗುವಂತೆ ಮಾಡಲು ನಿರ್ಧರಿಸಲಾಗಿದೆ. ಜಿಯೋಗ್ರಾಫಿಕ್ ಇನಾರ್ಮೇಷನ್ ಸಿಸ್ಟಂ (ಜಿಐಎಸ್) ಮ್ಯಾಪಿಂಗ್ ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ದೇಶದ ಒಟ್ಟಾರೆ ದೇಶೀಯ ಉತ್ಪಾದನೆಯನ್ನು (ಜಿಡಿಪಿ) ಗಣನೀಯ ಮಟ್ಟಕ್ಕೆ ಏರಿಸುವುದು ಮತ್ತೂಂದು ಉದ್ದೇಶವಾಗಿದೆ.
ಇದನ್ನೂ ಓದಿ:ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ
“ಕರ್ಮಯೋಗಿ’ಗೆ ಮತ್ತಷ್ಟು ಒತ್ತು:
ಜಿಐಎಸ್ ಆಧಾರಿತ ಯೋಜನೆ ಮತ್ತು ಅನುಷ್ಠಾನ ಪದ್ಧತಿಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಕೆಲಸವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಜಾರಿಗೊಳಿಸಿರುವ ಕರ್ಮಯೋಗಿ ಯೋಜನೆಯಡಿಯ ಒಂದು ಭಾಗವಾಗಿಯೇ ಇದನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.
ಮಿತ್ರುಭೂಮಿ ಮೂಲಕ ಡಿಜಿಟೈಸೇಷನ್:
2023ರೊಳಗೆ ಎಲ್ಲಾ ಭೂದಾಖಲೆಗಳನ್ನು ಡಿಜಿಟೈಸ್ಡ್ ತಂತ್ರಜ್ಞಾನದ ಮೂಲಕ ಲಭ್ಯವಾಗುವಂತೆ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಪ್ರತಿಯೊಂದು ಹೊಲಕ್ಕೆ ಅಥವಾ ಮನೆಯ ನಿವೇಶನಕ್ಕೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗುತ್ತದೆ. ಇದರ ಜೊತೆಯಲ್ಲೇ, ಕಂದಾಯ ಇಲಾಖೆಯ ಅಡಿಯಲ್ಲಿ ದಾಖಲಾಗುವ ಎಲ್ಲಾ ರೀತಿಯ ಭೂ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಇ-ಕೋರ್ಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಈ ಮೂಲಕ, ಭೂದಾಖಲೆಗಳು, ವ್ಯಾಜ್ಯಗಳ ಇತ್ಯರ್ಥ ವ್ಯವಸ್ಥೆಗಳಿಗೆ ಪಾರದರ್ಶಕತೆ ಕೊಡಲು ನಿರ್ಧರಿಸಲಾಗಿದೆ.
ಹಂತಹಂತವಾಗಿ ಜಾರಿ
ಸೆ. 18ರಂದು ಪ್ರಧಾನಿ ನೇತೃತ್ವದಲ್ಲಿ ಹಲವಾರು ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ದೇಶದ ನಾಗರಿಕರಿಗೆ ಅವರಿಗೆ ಬೇಕಾದ ಮೂಲದಾಖಲೆಗಳನ್ನು ಒಂದೇ ವ್ಯವಸ್ಥೆಯಡಿ ಕಲ್ಪಿಸುವ ಮಹತ್ವದ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿದ್ದರು. ಅದೇ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವಾರು ಹೊಸ ಆಲೋಚನೆಗಳುಳ್ಳ ಯೋಜನೆಗಳ ಬಗ್ಗೆ ಚರ್ಚಿಸಲಾಗಿತ್ತು. ಆಗ ರೂಪುಗೊಂಡಿರುವ ಹೊಸ ವ್ಯವಸ್ಥೆಗಳು, ಹೊಸ ಯೋಜನೆಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ