ಕೇಂದ್ರಕ್ಕೆ ಸುಳ್ಳು ಲೆಕ್ಕ ನೀಡಿದರೆ ಶಿಕ್ಷೆ : ವಿತ್ತ ಇಲಾಖೆ
ಕೇಂದ್ರ ಸರಕಾರದಿಂದ ರಾಜ್ಯಗಳಿಗೆ, ಅಧಿಕಾರಿ ಗಳಿಗೆ ಖಡಕ್ ವಾರ್ನಿಂಗ್
Team Udayavani, Apr 24, 2022, 6:25 AM IST
ಹೊಸದಿಲ್ಲಿ: ಕೇಂದ್ರ ಸರಕಾರದಿಂದ ಸಾಲ, ಅನುದಾನ ಅಥವಾ ಮತ್ಯಾವುದೇ ಆರ್ಥಿಕ ನೆರವು ಪಡೆಯಲು ಕೇಂದ್ರಕ್ಕೆ ಸುಳ್ಳು ವರದಿಗಳನ್ನು ಸಲ್ಲಿಸುವ ರಾಜ್ಯ ಸರಕಾರಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಹಣಕಾಸು ಇಲಾಖೆ ಎಲ್ಲ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.
ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಹಣಕಾಸು ಇಲಾಖೆ, “”ಕೆಲವೊಮ್ಮೆ ಉದ್ದೇಶಪೂರ್ವಕವಾಗಿ, ಇನ್ನು ಕೆಲವೊಮ್ಮೆ ಬೇಜವಾಬ್ದಾರಿಯಿಂದ ಸುಳ್ಳು ಲೆಕ್ಕ ನೀಡುತ್ತವೆ. ಇಂತಹ ಪ್ರಕರಣಗಳು ಬಯಲಿಗೆ ಬಂದಿವೆ. ಇನ್ನು ಮುಂದೆ ಹೀಗಾದರೆ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದೆ.
ಇದನ್ನೂ ಓದಿ:ಲತಾ ಮಂಗೇಶ್ಕರ್ ಸ್ಮರಣಾರ್ಥ ಮೊದಲ ಪ್ರಶಸ್ತಿ ಪ್ರಧಾನಿ ಮೋದಿಗೆ
ವಿವಿಧ ರಾಜ್ಯಗಳಿಗೆ ಸೇವಾ ನಿಮಿತ್ತ ಕೇಂದ್ರದಿಂದ ನಿಯೋಜನೆಗೊಂಡಿ ರುವ ಐಎಎಸ್, ಐಪಿಎಸ್ ಅಧಿಕಾರಿಗಳೂ ಇಂಥ ಸುಳ್ಳು ವರದಿಗಳನ್ನು ರಚಿಸುವಲ್ಲಿ ಸಹಕಾರ ನೀಡುತ್ತಿರುವ ವಿಚಾರವೂ ಕೇಂದ್ರದ ಗಮನಕ್ಕೆ ಬಂದಿದ್ದು, ಪ್ರಕರಣಗಳ ತನಿಖೆ ವೇಳೆ ಅವರ ಪಾತ್ರವಿರುವುದು ಸಾಬೀತಾದರೆ ಆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಈ ಆರೋಪ ಹೊತ್ತಿರುವ ಅಧಿಕಾರಿಗಳ ಬಡ್ತಿ, ವರ್ಗಾವಣೆ, ಇತರ ಹುದ್ದೆಗಳಿಗೆ ನಿಯೋಜನೆಗೊಳ್ಳುವಂಥ ಸಂದರ್ಭಗಳಲ್ಲಿ ಈ ಪ್ರಕರಣಗಳನ್ನು ಪರಿಗಣಿಸಿ, ಶಿಕ್ಷೆಯ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ವಿತ್ತ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ