ಈರುಳ್ಳಿ ಬೆಲೆ ಏರಿಕೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರಕಾರ
ಈರುಳ್ಳಿ ರಫ್ತು ಈಗಿಂದೀಗಲೇ ನಿಷೇಧ
Team Udayavani, Sep 29, 2019, 5:40 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅನಾಹುತ, ಬೆಳೆ ಕಡಿಮೆ ಕಾರಣಗಳಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ತೀವ್ರವಾಗಿ ಏರುತ್ತಿದ್ದು ಇದನ್ನು ತಡೆಯಲು ಕೇಂದ್ರ ಸರಕಾರ ಇದೀಗ ಮುಂದಾಗಿದೆ.
ಮೊದಲ ಕ್ರಮವಾಗಿ ಕೇಂದ್ರ ಸರಕಾರ ಈರುಳ್ಳಿ ರಫ್ತಿಗೆ ನಿಷೇಧ ಹೇರಿದೆ. ಅಲ್ಲದೇ ಮಾರಾಟಗಾರರು ಕಡಿಮೆ ದಾಸ್ತಾನು ಇಡುವಂತೆ ಹೇಳಿದ್ದು, ಹೆಚ್ಚುವರಿ ದಾಸ್ತಾನು ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಸೂಚಿಸಲಾಗಿದೆ. ಸಗಟು ಮಾರಾಟಗಾರರಿಗೆ 100 ಕ್ವಿಂಟಾಲ್ ಮತ್ತು ಹೋಲ್ಸೇಲ್ ಮಾರಾಟಗಾರರಿಗೆ 500 ಕ್ವಿಂಟಾಲ್ ದಾಸ್ತಾನು ಇಡಲಷ್ಟೇ ಅನುಮತಿ ನೀಡಲಾಗಿದೆ.
ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈರುಳ್ಳಿ ಬೆಲೆ ದುಪ್ಪಟ್ಟಾಗಿದೆ. ಆದ್ದರಿಂದ ಕೂಡಲೇ ರಫ್ತು ನಿಷೇಧಿಸಲಾಗಿದ ಎಎಂದು ಸಾಮಾನ್ಯ ವಿದೇಶಿ ಮಾರಾಟ ನಿರ್ದೇಶನಾಲಯ ಅಧಿಕಾರಿಗಳು ಹೇಳಿದ್ದಾರೆ.
ಸದ್ಯ ಅತಿ ಹೆಚ್ಚು ದರದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾಕ್ಕೆ ಭಾರತದಿಂದ ಈರುಳ್ಳಿ ಮಾರಾಟವಾಗುತ್ತಿದೆ. ಇದನ್ನು ತಡೆಯಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿನ ಕ್ರಮದ ಎಚ್ಚರಿಕೆಯನ್ನೂ ಸರಕಾರ ನೀಡಿದೆ.
ಹರಿಯಾಣಾ, ಆಂಧ್ರಪ್ರದೇಶ, ದಿಲ್ಲಿ, ತ್ರಿಪುರಾ, ಒಡಿಶಾದಲ್ಲಿ ಕೇಂದ್ರ ಗೋದಾಮಿನಿಂದ ಈರುಳ್ಳಿ ಪೂರೈಸಲು ಬೇಡಿಕೆ ಇಡಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯಲಾಗುತ್ತಿದೆ. ಮಳೆಯಿಂದಾಗಿ ಇಲ್ಲಿನ ಬೆಳೆಗಳಿಗೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ