ಕೋವಿಡ್ ಕಳವಳ ಭಾರತ ಲಾಕ್ ಡೌನ್: ಮಾಧ್ಯಮ ಸೇವೆಗೆ ನಿರಂತರ ಅವಕಾಶ ಕೊಡಿ: ಕೇಂದ್ರ
Team Udayavani, Mar 25, 2020, 6:54 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ 19 ವೈರಸ್ ಏಕಾಏಕಿ ಹರಡಿದ್ದರ ಹಿನ್ನೆಲೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದ ಕಾರ್ಯಾಚರಣೆಯ ನಿರಂತ ರತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಒತ್ತಾಯಿಸಿದೆ.
ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯ ದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ, ಟಿವಿ ಚಾನೆಲ್ಗಳು, ಮುದ್ರಣ ಮಾಧ್ಯಮಗಳು, ಸುದ್ದಿ ಸಂಸ್ಥೆಗಳು ಸಮಯೋಚಿತ ಮತ್ತು ಅಧಿಕೃತ ಮಾಹಿತಿ ಪ್ರಸಾರವನ್ನು ಖಚಿತಪಡಿಸಿಕೊಳ್ಳಲು ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿರುವ ಸಚಿವಾಲಯ, ಇವುಗಳು ಜನರಲ್ಲಿ ಸರಿಯಾದ ಮಾಹಿತಿ ನೀಡುತ್ತಿರುವುದಲ್ಲದೆ, ಜಾಗೃತಿ ಮೂಡಿಸುತ್ತಿವೆ. ಇದಲ್ಲದೆ ದೇಶವನ್ನು ಇನ್ನಷ್ಟು ಹೆಚ್ಚಿನ ಸ್ಥಾನಮಾನದಲ್ಲಿಡುವುದಕ್ಕೂ ಸೇವೆ ಅಗತ್ಯವಾಗಿದ್ದು, ಸುಳ್ಳು ಹಾಗೂ ನಕಲಿ ಸುದ್ದಿಗಳನ್ನೂ ಸಹ ತಪ್ಪಿಸಬೇಕಾದಂತಹ ಕೆಲಸ ಆಗಬೇಕಿದೆ ಎಂದು ಪತ್ರದಲ್ಲಿ ತಿಳಿಸಿದೆ.
ಈ ಮಾಧ್ಯಮ ಹಾಗೂ ಇತರ ಎಲ್ಲ ನೆಟ್ವರ್ಕ್ಗಳು ಉತ್ತಮ ಅಭ್ಯಾಸಗಳನ್ನು ಉತ್ತೇಜಿಸಬೇಕಾಗಿದ್ದು, ಅದನ್ನು ಖಾತರಿಪಡಿಸಲು ಪ್ರಮುಖ ಪಾತ್ರ ವಹಿಸುತ್ತಿವೆ. ಹಾಗಾಗಿ ಈ ಸೇವೆಗಳ ಕಾರ್ಯದ ಅನುಕೂಲಕ್ಕಾಗಿ ರಾಜ್ಯ ಸರಕಾರಗಳು ಹಾಗು ಕೇಂದ್ರಾಡಳಿತ ಪ್ರದೇಶಗಳ ಪ್ರೋತ್ಸಾಹ ಅಗತ್ಯ ಎಂದು ಪತ್ರದ ಮೂಲಕ ಒತ್ತಾಯಿಸಿದೆ.
ಈ ಸೇವೆಗಳಲ್ಲಿ ಟಿವಿ ಚಾನೆಲ್ಗಳು, ಸುದ್ದಿ ಏಜೆನ್ಸಿಗಳು, ಟೆಲಿಫೋನ್ ಆಪರೇಟರ್ಗಳು, ಡಿಜಿಟಲ್ ಆಪರೇಟರ್ಗಳು, ಡಿಜಿಟಲ್ ಸ್ಯಾಟಲೈಟ್, ರೇಡಿಯೋ ಮತ್ತು ಸಮುದಾಯ ರೇಡಿಯೋ ಕೇಂದ್ರಗಳು ಸೇರಿ ಇತರ ಸೇವೆಗಳಿಗೆ ಈ ಕೊರೊನಾ ವೈರಸ್ ತಡೆಗಟ್ಟಲು ಯಾವುದೇ ನಿರ್ಬಂಧ ವಿಧಿಸಲು ಆಲೋಚಿಸದೆ ಎಲ್ಲರಿಗೂ ಕಾರ್ಯಾಚರಣೆಯಲ್ಲಿರಲು ಅನುಮತಿ ನೀಡಬೇಕೆಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ಇನ್ನು ಈ ರಂಗದಲ್ಲಿ ಸೇವೆ ಸಲ್ಲಿಸುವ ಸಿಬಂದಿಗೆ ಸೌಲಭ್ಯಗಳನ್ನು
ಒದಗಿಸುವುದರ ಜತೆಗೆ ಸಿಬಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಬೇಕು. ಇದರೊಂದಿಗೆ ಮಾಧ್ಯಮದವರು, ಡಿಎಸ್ಎನ್ಜಿಗಳು ಸೇರಿದಂತೆ ಇತರರನ್ನು ಕರೆದೊಯ್ಯುವ ವಾಹನಗಳಿಗೆ ಇಂಧನ ಒದಗಿಸುವುದು ಸೇರಿದಂತೆ ಎಲ್ಲಿ ಬೇಕಾದರೂ ಅವುಗಳು ಸಂಚರಿಸ ಬಹುದಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ