‘ಗರೀಬ್ ರಥ’ ಇನ್ನು ಕೇವಲ ನೆನಪು ಮಾತ್ರ?

ಮಿತದರದ ರೈಲು ಸೇವೆಯನ್ನೇ ರದ್ದುಗೊಳಿಸಲು ಕೇಂದ್ರದ ಚಿಂತನೆ

Team Udayavani, Jul 18, 2019, 5:01 PM IST

Garib-Rath

ನವದೆಹಲಿ: ಮಧ್ಯಮ ಮತ್ತು ಕಡಿಮೆ ಆದಾಯದ ರೈಲ್ವೇ ಪ್ರಯಾಣಿಕರನ್ನು ಗಮನದಲ್ಲಿರಿಸಿಕೊಂಡು ಅಂದಿನ ರೈಲ್ವೇ ಸಚಿವ ಲಾಲೂ ಪ್ರಸಾದ್ ಯಾದವ್ ಅವರು ಪ್ರಾರಂಭಿಸಿದ್ದ ‘ಗರೀಬ್ ರಥ’ ರೈಲು ಇನ್ನು ಇತಿಹಾಸದ ಭಾಗವಾಗಲಿದೆಯೇ? ಹೌದೆನ್ನುತ್ತಿದೆ ಈ ವಲಯದಲ್ಲಿ ನಡೆಯುತ್ತಿರುವ ಇತ್ತೀಚಿಗನ ಬೆಳವಣಿಗೆಗಳು. ಕೆಂದ್ರ ಸರಕಾರವು ಗರೀಬ್ ರಥ ರೈಲು ಸೇವೆಯನ್ನು ನಿಧಾನವಾಗಿ ಸ್ಥಗಿತಗೊಳಿಸುವ ಚಿಂತನೆಯಲ್ಲಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಪೂರಕವಾಗಿ ರೈಲ್ವೇ ಸಚಿವಾಲಯವು ಗರೀಬ್ ರಥ ಎಕ್ಸ್ ಪ್ರೆಸ್ ರೈಲಿನ ಹೊಸ ಬೋಗಿಗಳ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಈಗಾಗಲೇ ಆದೇಶಿಸಿದೆ ಎಂಬ ಅಂಶವೂ ಇದೀಗ ಬಹಿರಂಗಗೊಂಡಿದೆ. ಇದರ ಅರ್ಥ ಒಂದೋ ಗರೀಬ್ ರಥ ರೈಲು ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಇಲ್ಲವೇ ಇವುಗಳನ್ನು ಮೇಲ್ ಅಥವಾ ಎಕ್ಸ್ ಪ್ರೆಸ್ ರೈಲುಗಳನ್ನಾಗಿ ಪರಿವರ್ತಿಸಲಾಗುವುದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇತ್ತ ಭಾರತೀಯ ರೈಲ್ವೇಯು ಈಗಾಗಲೇ ಕಾಥ್ಗೊಡಂ – ಜಮ್ಮು ಮತ್ತು ಕಾಥ್ಗೊಡಂ – ಕಾನ್ಪುರ ಮಾರ್ಗಗಳಲ್ಲಿ ಸಂಚರಿಸುತ್ತಿದ್ದ ಗರೀಬ್ ರಥ ರೈಲು ಸೇವೆಗಳನ್ನು ಮೇಲ್ ಅಥವಾ ಎಕ್ಸ್ ಪ್ರೆಸ್ ರೈಲು ಸೇವೆಗಳಿಗೆ ಬದಲಾಯಿಸಿದೆ ಎಂಬುದು ಗಮನಾರ್ಹ ಅಂಶವಾಗಿದೆ.
ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಇನ್ನು ಹೆಚ್ಚಿನ ದರವನ್ನು ನೀಡಿ ರೈಲು ಪ್ರಯಾಣ ಕೈಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಉದಾಹರಣೆಗೆ ದೆಹಲಿ – ಬಾಂದ್ರಾ ಗರೀಬ್ ರಥ ರೈಲು ಪ್ರಯಾಣದ ದರ 1050 ರೂಪಾಯಿಗಳಾಗಿತ್ತು ಆದರೆ ಇದೀಗ ಇದೇ ಮಾರ್ಗದ ಎಕ್ಸ್ ಪ್ರೆಸ್ ರೈಲಿನ ದರ 1500 ರಿಂದ 1600 ರೂಪಾಯಿಗಳಾಗಲಿವೆ.

ಸದ್ಯಕ್ಕೆ ಕಾರ್ಯಾಚರಿಸುತ್ತಿರುವ ಗರೀಬ್ ರಥ ರೈಲಿನ ಬೋಗಿಗಳು 10-14 ವರ್ಷಗಳಷ್ಟು ಹಳೆಯದಾಗಿರುವುದರಿಂದ ಇವುಗಳ ನಿರ್ವಹಣಾ ವೆಚ್ಚವು ರೈಲ್ವೇ ಇಲಾಖೆಗೆ ಒಂದು ಹೊರೆಯಾಗಿ ಪರಿಣಮಿಸುತ್ತಿದೆ. ಹಾಗಾಗಿ ರೈಲ್ವೇ ಇಲಾಖೆಗೆ ಹೆಚ್ಚು ಆದಾಯವನ್ನು ತಂದುಕೊಡುವ ನಿಟ್ಟಿನಲ್ಲಿ ಗರೀಬ್ ರಥದ ಬದಲಿಗೆ 3-ಎಸಿ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸುವ ಯೋಚನೆ ರೈಲ್ವೇಯದ್ದಾಗಿದೆ.

ಈ ಯು.ಪಿ.ಎ. –I ಸಮ್ಮಿಶ್ರ ಸರಕಾರದಲ್ಲಿ ರೈಲ್ವೇ ಸಚಿವರಾಗಿದ್ದ ಲಾಲೂ ಪ್ರಸಾದ್ ಯಾದವ್ ಅವರು  ಎ.ಸಿ. ತ್ರೀ ಟೈರ್ ಗರೀಬ್ ರಥ್ ರೈಲುಗಳ ಓಡಾಟಕ್ಕೆ ಚಾಲನೆ ನೀಡಿದ್ದರು. ಮಧ್ಯಮ ಮತ್ತು ತಳ ಆದಾಯವನ್ನು ಹೊಂದಿರುವ ರೈಲ್ವೇ ಪ್ರಯಾಣಿಕರನ್ನು ಗಮನದಲ್ಲಿರಿಸಿಕೊಂಡು ಇದನ್ನು ಪ್ರಾರಂಭಿಸಲಾಗಿತ್ತು. ಪ್ರಪ್ರಥಮ ‘ಗರೀಬ್ ರಥ’ ರೈಲುಯಾನ ಬಿಹಾರದ ಸಹರ್ಸಾದಿಂದ ಪಂಜಾಬ್ ನ ಅಮೃತಸರದ ನಡುವೆ ನಡೆದಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.