ನಕಲಿ ನಿರ್ದೇಶಕರಿಗೆ ಕೆವೈಸಿ ಕಪಿಮುಷ್ಟಿ


Team Udayavani, Jun 9, 2018, 6:00 AM IST

vv-30.jpg

ಹೊಸದಿಲ್ಲಿ: ವಿಜಯ್‌ ಮಲ್ಯ ಹಾಗೂ ನೀರವ್‌ ಮೋದಿಯಂಥ ಉದ್ಯಮಿಗಳು ಬ್ಯಾಂಕ್‌ಗಳಿಗೆ ಮೋಸ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪರಾರಿಯಾದಂತಹ ಪ್ರಕರಣಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಲು ಕೇಂದ್ರ ಸರಕಾರ ಈಗ ಮಹತ್ವದ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ. ಅಷ್ಟೇ ಅಲ್ಲ, ಇದು ನಕಲಿ ಕಂಪೆನಿಗಳನ್ನು ನಿಯಂತ್ರಿಸಲೂ ನೆರವಾಗಲಿದೆ. ಕಂಪೆನಿ ನಿರ್ದೇಶಕರ  ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಗಳನ್ನು ಸಂಗ್ರಹಿಸುವ ಬೃಹತ್‌ ಅಭಿಯಾನವನ್ನು ಕಾರ್ಪೊರೇಟ್‌ ವ್ಯವಹಾರಗಳ ಸಚಿವಾಲಯ ಆರಂಭಿಸಲಿದೆ. 

ಇದರ ಅಡಿಯಲ್ಲಿ ಕಂಪೆನಿ ನಿರ್ದೇಶಕರ ಪಾಸ್‌ಪೋರ್ಟ್‌, ಪಾನ್‌ ಸಂಖ್ಯೆ ಮತ್ತು ಸಂಪರ್ಕ ವಿವರಗಳನ್ನು ದಾಖಲಿಸಲಾಗುತ್ತದೆ. ಪ್ರತಿ ವರ್ಷವೂ ವಾರ್ಷಿಕ ವಿತ್ತ ವರದಿಯನ್ನು ಸಲ್ಲಿಸುವಾಗ ಕಂಪೆನಿ ಕಾರ್ಯದರ್ಶಿ ಅಥವಾ ಚಾರ್ಟರ್ಡ್‌ ಅಕೌಂಟಂಟ್‌ಗಳು ಇದನ್ನು ಸಲ್ಲಿಸಬೇಕಿರುತ್ತದೆ.
ಇದರ ಜತೆಗೆ ಕಂಪೆನಿಯ ವಿಳಾಸವನ್ನೂ ಇನ್ನೊಂದು ನಮೂನೆಯಲ್ಲಿ ಸಲ್ಲಿಸಬೇಕಿರುತ್ತದೆ. ಇದನ್ನು ಕೂಡ ಪ್ರತಿ ವರ್ಷ ಅಪ್‌ಡೇಟ್‌ ಮಾಡಬೇಕು. ಈ ಮೂಲಕ ನಕಲಿ ಕಂಪೆನಿ ಸ್ಥಾಪಿಸುವುದನ್ನು ತಡೆಯಲು ಸಾಧ್ಯವಾಗುತ್ತದೆ. ಕಾರ್ಪೊರೇಟ್‌ ವಹಿವಾಟುಗಳ ಸಚಿವಾಲಯದ ಕಾರ್ಯದರ್ಶಿ ಇಂಜೆತಿ ಶ್ರೀನಿವಾಸ್‌ ಈ ಬಗ್ಗೆ ವಿವರಣೆ ನೀಡಿದ್ದು, ಈ ಕೆವೈಸಿ ಅಭಿಯಾನದಲ್ಲಿ ಸುಮಾರು 33 ಲಕ್ಷ ಕಂಪೆನಿ ನಿರ್ದೇಶಕರ ವಿವರಗಳನ್ನು ನವೀಕರಿಸಲಾಗುತ್ತದೆ ಎಂದಿದ್ದಾರೆ.

ಶೀಘ್ರದಲ್ಲೇ ಈ ಅಭಿಯಾನವನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ವಿದೇಶಿಯರಿಗೂ ಪ್ರತ್ಯೇಕ ನಮೂನೆಯಿದ್ದು, ಅವರೂ ಕೂಡ ಸಚಿವಾಲಯದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಿರುತ್ತದೆ. ಭೌತಿಕ ವಿಳಾಸದ ವಿವರಗಳು ಮತ್ತು ನಿರ್ದೇಶಕರಿಗೆ ಸಂಬಂಧಿಸಿದ ವಿವರಗಳನ್ನು ಕಂಪೆನಿ ಕಾರ್ಯದರ್ಶಿ ಅಥವಾ ಚಾರ್ಟರ್ಡ್‌ ಅಕೌಂಟೆಂಟ್‌ ಕಡ್ಡಾಯವಾಗಿ ಭರ್ತಿ ಮಾಡಬೇಕಿದೆ.

ಈಗಾಗಲೇ ನೋಟು ಅಮಾನ್ಯದ ಅನಂತರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಣ ಜಮೆ ಮಾಡಿದ ಹಲವು ಕಂಪೆನಿಗಳ ಮೇಲೆ ನಿಗಾ ಇಟ್ಟಿರುವ ವಿವಿಧ ತನಿಖಾ ಸಂಸ್ಥೆಗಳು, ನಕಲಿ ಕಂಪೆನಿಗಳನ್ನು ರದ್ದುಗೊಳಿಸಿದ್ದವು. ಕೆವೈಸಿ ಅಭಿಯಾನದ ಮೂಲಕ ಮತ್ತೂಂದು ಸುತ್ತಿನಲ್ಲಿ ನಕಲಿ ಕಂಪೆನಿಗಳ ಮೇಲೆ ಕೇಂದ್ರ ಸರಕಾರ ಕಡಿವಾಣ ಹಾಕಲಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.