ಅರಣ್ಯ ಕಾಯ್ದೆ ತಿದ್ದುಪಡಿ ಕರಡು ವಾಪಸ್ ಪಡೆದ ಕೇಂದ್ರ ಸರಕಾರ
Team Udayavani, Nov 16, 2019, 5:30 AM IST
ಹೊಸದಿಲ್ಲಿ: ಭಾರತೀಯ ಅರಣ್ಯ ಕಾಯ್ದೆ 1972ರ ತಿದ್ದುಪಡಿಯ ಕರಡನ್ನು ಕೇಂದ್ರ ಸರಕಾರ ಕೊನೆಗೂ ವಾಪಸ್ ಪಡೆದಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾಬ್ಡೇಕರ್ ಅವರೇ ಈ ವಿಷಯ ತಿಳಿಸಿದ್ದು, ತಿದ್ದುಪಡಿಯ ಕರಡು ಜನರಲ್ಲಿ ಕೆಲವೊಂದು ತಪ್ಪು ಅಭಿಪ್ರಾಯ ಗಳನ್ನು ಮೂಡಿಸಿದೆ ಎಂದು ಹೇಳಿದ್ದಾರೆ.
ಸಂಸತ್ನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಳ್ಳುವ ಮೂಲಕ, ವಿಪಕ್ಷಗಳಿಗೆ ಚರ್ಚೆಯ ವಿಷಯ ವಾಗದಂತೆ ಮುನ್ನೆಚ್ಚರಿಕೆ ವಹಿಸಿದೆ.
ಶುಕ್ರವಾರ ಮಾತನಾಡಿದ ಜಾವಡೇಕರ್, 11 ರಾಜ್ಯಗಳು ತಮ್ಮದೇ ಸ್ವಂತ ಅರಣ್ಯ ಕಾನೂನುಗಳನ್ನು ತಂದಿವೆ. ಅವುಗಳಿಗೆ ಸುಧಾರಣೆ ತರಲು ಸಾಧ್ಯವೇ ಎಂಬ ನಿಟ್ಟಿನಲ್ಲಿ ಅಧ್ಯಯನ ಕೈಗೊಳ್ಳಲು ಸರಕಾರ ಮುಂದಾಯಿತು. ಆದರೆ, ಈ ಅಧ್ಯಯನವನ್ನು ಜನರು ಕೇಂದ್ರ ಸರಕಾರ ಅರಣ್ಯ ಕಾಯ್ದೆಗೆ ತಂದ ತಿದ್ದುಪಡಿ ಎಂದೇ ಭಾವಿಸಿದರು. ಸರಕಾರಕ್ಕೆ ಅಂಥ ಉದ್ದೇಶ ಇರಲಿಲ್ಲ. ಬುಡಕಟ್ಟು ಜನಾಂಗೀಯರು ಹಾಗೂ ಅರಣ್ಯಪ್ರದೇಶದಲ್ಲಿ ವಾಸಿಸುವವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಬಿಂಬಿಸಲಾಯಿತು.
ಇಂಥ ತಪ್ಪು ಕಲ್ಪನೆಗಳಿಗೆ ತೆರೆ ಎಳೆಯುವ ಉದ್ದೇಶದಿಂದ ನಾವು ಈಗ ಕರಡು ತಿದ್ದುಪಡಿಯನ್ನು ವಾಪಸ್ ಪಡೆಯಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ