ಕೂಚ್ ಬೆಹಾರ್ ಹಿಂಸಾಚಾರಕ್ಕೆ ದೀದಿ ಕಾರಣ : ಕೇಂದ್ರ ಸಚಿವ ಅಮಿತ್ ಶಾ
Team Udayavani, Apr 11, 2021, 7:11 PM IST
ಕೋಲ್ಕತ್ತಾ : ಕೂಚ್ ಬೆಹಾರ್ ನಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ ಎಂದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ತಿರಗೇಟು ನೀಡಿದ್ದಾರೆ.
ಇಂದು ( ಏಪ್ರಿಲ್ 11) ಚುನಾವಣಾ ಜಾಥಾದಲ್ಲಿ ದೀದಿ ವಿರುದ್ಧ ಗುಡುಗಿರುವ ಶಾ, ಕೇಂದ್ರ ಪಡೆಗಳ ವಿರುದ್ಧ ಮಮತಾ ಬ್ಯಾನರ್ಜಿ ಕೂಚ್ ಬೆಹಾರ್ ನಲ್ಲಿ ಹಿಂಸಾಚಾರಕ್ಕೆ ಪ್ರಚೋದಿಸಿದ್ದರು. ಅಲ್ಲಿನ ಯುವಕ ಹಾಗೂ ಮಹಿಳೆಯರಿಗೆ ಕೇಂದ್ರ ಪಡೆಗಳಿಗೆ ಘೇರಾವ್ ಹಾಕುವಂತೆ ಕರೆ ನೀಡಿದ್ದರು. ‘ನೀವು ( ದೀದಿ) ಈ ರೀತಿ ಹೇಳಿ ವ್ಹೀಲ್ ಚೇರ್ ಮೇಲೆ ಕುಳಿತು ಅಲ್ಲಿಂದ ತೆರಳಿದಿರಿ. ಆದರೆ, ನಿಮ್ಮಿಂದಿದಾಗಿ ನಾಲ್ಕು ಜನರು ಪ್ರಾಣ ಕಳೆದುಕೊಳ್ಳುವಂತಾಯಿತು. ಅದೇ ದಿನ ಮುಂಜಾನೆ ಬಿಜೆಪಿ ಕಾರ್ಯಕರ್ತ ಕೂಡ ಸಾವನ್ನಪ್ಪಿದ’ ಎಂದು ಅಮಿತ್ ಶಾ ಕಿಡಿ ಕಾರಿದ್ದಾರೆ.
ಕೂಚ್ ಬೆಹಾರ್ ಘಟನೆ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿರುವ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿರುವ ಅಮಿತ್ ಶಾ, ದೀದಿ ಪದೇ-ಪದೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಜನರು ಯಾವಾಗ ಬಯಸುತ್ತಾರೋ ಅವತ್ತು ನಾನು ರಾಜೀನಾಮೆ ನೀಡುತ್ತೇನೆ. ಆದರೆ,ನೀವು (ದೀದಿ) ಮೇ 2 ರಂದು ರಾಜೀನಾಮೆ ನೀಡಲು ಇವಾಗಿನಿಂದಲೇ ತಯಾರಿ ನಡೆಸಿ ಎಂದು ಕುಟುಕಿದ್ದಾರೆ.
ಚುನಾವಣೆ ಪ್ರಚಾರದ ವೇಳೆ ದೀದಿ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಭಾರತೀಯ ಜನತಾ ಪಕ್ಷಕ್ಕೆ ಎಲ್ಲರೂ ಮತ ನೀಡುವಂತೆ ಕೋರಿದ್ದಾರೆ. ದೀದಿ ಕಳೆದ 10 ವರ್ಷಗಳಿಂದ ರಾಜ್ಯಭಾರ ಮಾಡಿದ್ದಾರೆ.ಅವರಿಗೆ ಒಂದು ಸಣ್ಣ ಬಿಳ್ಕೋಡುಗೆ ಬೇಡವೆ? ಆದ್ದರಿಂದ ನೀವು ಬಿಜೆಪಿಯ 200 ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಮಮತಾ ಅವರನ್ನು ಮನೆಗೆ ಕಳುಹಿಸಿ ಎಂದು ಮತದಾರರಿಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ