ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು


Team Udayavani, Apr 13, 2021, 9:22 PM IST

fhf

ನವದೆಹಲಿ :  ರಸಗೊಬ್ಬರ ಬೆಲೆ ಏರಿಕೆ ಹಾಗೂ ಸಬ್ಸಿಡಿ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಅನ್ನು ಬಾಲಿಶ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು.

ಮಾಜಿ ಪ್ರಧಾನಿ ಮಗನಾಗಿ, ಮಾಜಿ ಮುಖ್ಯಮಂತ್ರಿಯಾಗಿ ಅವರಿಗೆ ದೇಶದ ರಸಗೊಬ್ಬರ ಬೆಲೆ ಹಾಗೂ ಸರಬರಾಜು ವ್ಯವಸ್ಥೆ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದರ ಪ್ರಾಥಮಿಕ ತಿಳುವಳಿಕೆಯೂ ಇಲ್ಲದಿರುವುದು ಶೋಚನೀಯವಾಗಿದೆ. ಅವರಿಗೆ ಈ ಬಗ್ಗೆ ಏನಾದರು ಮಾಹಿತಿ ಬೇಕಾದರೆ ಕೇಳಲಿ. ನಾವು ಒದಗಿಸುತ್ತೇವೆ ಎಂದು ಸದಾನಂದ ಗೌಡ ತಿಳಿಸಿದರು.

ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಚಿವರು, ದೇಶಾದ್ಯಂತ ಲಭ್ಯವಿರುವ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೇಯ ದಾಸ್ತಾನನ್ನು ಈ ಹಿಂದಿನ ದರದಲ್ಲಿಯೇ ಮಾರಾಟ ಮಾಡಲು ರಸಗೊಬ್ಬರ ಉತ್ಪಾದಕರು ಸಮ್ಮತಿಸಿದ್ದಾರೆ. ಇಫ್ಕೋ, ಐಪಿಎಲ್ ನಂತಹ ಪ್ರಮುಖ ಕಂಪನಿಗಳು ಹಳೆ ದರ ಮುಂದುವರಿಸುವ ಬಗ್ಗೆ ಆಯಾ ರಾಜ್ಯ ಕೃಷಿ ಇಲಾಖೆಗಳಿಗೆ ಈಗಾಗಲೇ ಪತ್ರ ಬರೆದಿವೆ ಎಂದರು.

ದೇಶದಲ್ಲಿ ಎಲ್ಲ ನಮೂನೆಯ ರಸಗೊಬ್ಬರಗಳು ಸಾಕಷ್ಟು ದಾಸ್ತಾನು ಇವೆ. ಮುಂಗಾರು ಹಂಗಾಮಿನಲ್ಲಿ ಯಾವುದೇ ರೀತಿಯಲ್ಲಿ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಇದಕ್ಕೆ ಈಗಿನಿಂದಲೇ ಎಲ್ಲ ರೀತಿಯ ಪೂರ್ವಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ರೈತ ಕಲ್ಯಾಣದ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಇರುವ ಬದ್ಧತೆಯ ಬಗ್ಗೆ ಯಾರಿಂದಲೂ ಪ್ರಮಾಣ ಪತ್ರ ಬೇಕಾಗಿಲ್ಲ. ರೈತರಿಗೆ ಆದಷ್ಟು ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಪೂರೈಸಲು ಮೋದಿ ಸರ್ಕಾರ ಬದ್ಧವಾಗಿದೆ. ರಸಗೊಬ್ಬರ ಸಬ್ಸಿಡಿಗಾಗಿ ಭಾರೀ ದೊಡ್ಡ ಮೊತ್ತದ ಹಣವನ್ನು ವ್ಯಯಿಸಲಾಗುತ್ತದೆ. 2019-20ನೇ ಸಾಲಿನಲ್ಲಿ ರಸಗೊಬ್ಬರ ಸಬ್ಸಿಡಿಗಾಗಿ 83,467.85 ಕೋಟಿ ರೂ ಒದಗಿಸಲಾಗಿತ್ತು. ಕಳೆದ ಸಾಲಿನಲ್ಲಿ (2020-21) ಕೊರೊನಾ ಸಂಕಷ್ಟದ ಮಧ್ಯೆಯೂ 1,31,229.51 ಕೋಟಿ ರೂಪಾಯಿ ರಸಗೊಬ್ಬರ ಸಬ್ಸಿಡಿ ನೀಡಲಾಗಿದೆ. ಒಂದೇಒಂದು ನಯಾಪೈಸೆ ಸಬ್ಸಿಡಿಯನ್ನೂ ಉಳಿಸಿಕೊಂಡಿಲ್ಲ. ಇದು ಮೋದಿ ಸರ್ಕಾರ ಕಾರ್ಯನಿರ್ವಹಿಸುವ ರೀತಿ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.