Hanuman Jayanti: ಭದ್ರತೆಗೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ
ಬಂಗಾಲದ ಮೂರು ಜಿಲ್ಲೆಗಳಲ್ಲಿ ಅರೆ ಸೇನಾಪಡೆ ನಿಯೋಜನೆ
Team Udayavani, Apr 6, 2023, 6:05 AM IST
ಹೊಸದಿಲ್ಲಿ: ದೇಶಾದ್ಯಂತ ಗುರುವಾರ ಹನುಮಾನ್ ಜಯಂತಿ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಹೀಗೆಂದು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾ ಲಯ ಬುಧವಾರ ಮುನ್ನೆಚ್ಚರಿಕೆಯ ಸುತ್ತೋಲೆ ಕಳುಹಿಸಿದೆ.
ಮಾ.30ರಂದು ರಾಮನವಮಿ ವೇಳೆ ಪಶ್ಚಿಮ ಬಂಗಾಲ, ಬಿಹಾರಗಳಲ್ಲಿ ಕೋಮು ಗಲಭೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಅಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಮುಖ್ಯವಾಗಿ ಪಶ್ಚಿಮ ಬಂಗಾಲ, ಬಿಹಾರಗಳಿಗೆ ಗಂಭೀರ ಎಚ್ಚರಿಕೆ ರವಾನಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಅರೆ ಸೇನಾಪಡೆ ನಿಯೋಜನೆ: ಕಲ್ಕತಾ ಹೈಕೋರ್ಟ್ನಿಂದ ತೀವ್ರ ತರಾಟೆಗೆ ಒಳಗಾದ ಬಳಿಕ ಪಶ್ಚಿಮ ಬಂಗಾಲ ಸರಕಾರ ಕೋಮುಸೂಕ್ಷ್ಮ ಪ್ರದೇಶಗಳಾದ ಹೂಗ್ಲಿ, ಹೌರಾ, ಬಾರೆಕ್ಪುರಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲು ನಿರ್ಧರಿಸಿದೆ. ಸದ್ಯ ಅಲ್ಲಿ ರಾಮನವಮಿ ವೇಳೆ ಹಿಂಸಾಕೃತ್ಯಗಳು ನಡೆದು ಪರಿಸ್ಥಿತಿ ಇನ್ನಷ್ಟೇ ತಹಬದಿಗೆ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?