ಪೆಗಾಸಸ್ ಪ್ರಕರಣವನ್ನು ಬಗೆಹರಿಸಲಿ | ದೇಶದಲ್ಲಿ ಸರ್ವಾಧಿಕಾರ ನಡೆಯುತ್ತಿದೆ : ಖರ್ಗೆ ಗುಡುಗು
Team Udayavani, Jul 27, 2021, 3:41 PM IST
ನವ ದೆಹಲಿ : ಪೆಗಾಸಸ್ ವಿಚಾರದ ಬಗ್ಗೆ ಕೇಂದ್ರ ಸರ್ಕಾರ ಸರ್ವಾಧಿಕಾರ ಧೋರಣೆಯನ್ನು ತೋರಿಸುತ್ತಿದೆ. ಪೆಗಾಸಸ್ ಚರ್ಚೆಯ ಬಗ್ಗೆ ಒಂದಿನಿತೂ ಗಮನ ಕೇಂದ್ರ ಸರ್ಕಾರ ನೀಡುತ್ತಿಲ್ಲವೆಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಕೇಂದ್ರ ಸರ್ಕಾರ ಸರ್ವಾಧೀಕಾರವನ್ನು ಮಾಡುತ್ತಿದೆ. ಪೆಗಾಸಸ್ ಸ್ಪೈವೇರ್ ಮೂಲಕ ದೇಶದ ಪ್ರಮುಖ ಪತ್ರಿಕೋದ್ಯಮಿಗಳು, ವಿರೋಧ ಪಕ್ಷಗಳ ನಾಯಕರನ್ನು ಒಳಗೊಂಡು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧಿಶರು, ಸೇನಾಧಿಕಾರಿಗಳ ವಿರುದ್ಧ ಈ ಅಸ್ತ್ರವನ್ನು ಬಳಸಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ : ಐಎಂಡಿಬಿ ರೇಟಿಂಗ್ ನಲ್ಲಿ ಟಾಪ್ : ಜೋರಾಗಿದೆ ಕಿಚ್ಚನ ‘ವಿಕ್ರಾಂತ್ ರೋಣ’ ಕ್ರೇಜ್
ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ವಿಶ್ವದ ಯಾವ ದೇಶದಲ್ಲಿಯೂ ಹೀಗೆ ಮಾಡುವುದಿಲ್ಲ. ಕಂಪ್ಯೂಟರ್ ಮೂಲ ದಾಖಲೆಗಳೊಂದಿಗೆ ಟ್ಯಾಂಪರಿಂಗ್, ಹ್ಯಾಕಿಂಗ್ ವಿರುದ್ಧವಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆ ದೇಶದಲ್ಲಿ ಇದೆ. ಆದರೇ, ಕೇಂದ್ರ ಸರ್ಕಾರ ಪತ್ರಿಕೋದ್ಯಮಿಗಳು, ರಾಜಕೀಯ ವಿರೋಧ ಪಕ್ಷದ ನಾಯಕರು, ಸುಪ್ರೀಂ ಕೋರ್ಟ್ ವಿರುದ್ಧ ಬೇಹುಗಾರಿಕೆ ಮಾಡಲು ಅನುಮತಿಸುತ್ತದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಖರ್ಗೆ, ದೇಶದಲ್ಲಿ ಪ್ರಧಾನಿ ಸರ್ವಾಧಿಕಾರವನ್ನು ಮಾಡುತ್ತಿದ್ದಾರೆ. ಪೆಗಾಸಸ್ ವಿಚಾರದ ಕುರಿತಾಗುತ್ತಿರುವ ಚರ್ಚೆಯನ್ನು ಬಗೆಹರಿಸುವುದಕ್ಕೆ ಯಾವ ರೀತಿಯಿಂದಲೂ ಪ್ರಯತ್ನಿಸುತ್ತಿಲ್ಲ. ನಾವೆಲ್ಲರೂ ಈ ಪ್ರಕರಣದ ವಿಚಾರವಾಗಿ ಹೋರಾಟ ಮಾಡುತ್ತೇವೆ ಎಂದು ಸಿಡಿದಿದ್ದಾರೆ.
ದೇಶದ ಪ್ರಮುಖ 40 ಮಂದಿ ಪತ್ರಕರ್ತರನ್ನು ಒಳಗೊಂಡು ದೇಶಧ ಪ್ರಮುಖ ವಿರೋಧ ಪಕ್ಷದ ನಾಯಕರು, ಸುಪ್ರೀಂ ಕೋರ್ಟ್ ಹಾಗೂ ಸೇನಾಧಿಕಾರಿಗಳ ವಿರುದ್ಧ ಈ ಅಸ್ತ್ರವನ್ನು ಬಳಸಲಾಗಿದೆ ಎಂದು ಕಾಂಗ್ರೆಸ್ ಸೇರಿ ಇತರೆ ವಿರೋಧ ಪಕ್ಷಗಳು ಆರೋಪ ಮಾಡಿವೆ.
ಇದನ್ನೂ ಓದಿ : ಕಾಂಗ್ರೆಸ್ ನೊಂದಿಗೆ ಗೋವಾ ಫಾರ್ವಾರ್ಡ್ ಪಕ್ಷ ಚುನಾವಣಾ ಪೂರ್ವ ಮೈತ್ರಿ : ವಿಜಯ್ ಸರ್ದೇಸಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’