ನಾಗಲ್ಯಾಂಡ್ ಸೇರಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ಆನಂದಿಬೆನ್ ಉತ್ತರಪ್ರದೇಶಕ್ಕೆ
Team Udayavani, Jul 20, 2019, 2:53 PM IST
ನವದೆಹಲಿ: ಮಧ್ಯಪ್ರದೇಶ, ಉತ್ತರಪ್ರದೇಶ, ಪಶ್ಚಿಮಬಂಗಾಳ, ಬಿಹಾರ, ನಾಗಲ್ಯಾಂಡ್ ಹಾಗೂ ತ್ರಿಪುರಾ ಸೇರಿದಂತೆ ಆರು ರಾಜ್ಯಗಳಿಗೆ ಶನಿವಾರ ಕೇಂದ್ರ ಸರ್ಕಾರ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಗುಜರಾತ್ ಮಾಜಿ ಮುಖ್ಯಮಂತ್ರಿ, ಹಾಲಿ ಮಧ್ಯಪ್ರದೇಶ ಗವರ್ನರ್ ಆನಂದಿಬೆನ್ ಪಟೇಲ್ ಅವರನ್ನು ವರ್ಗಾವಣೆಗೊಳಿಸಿ ಉತ್ತರಪ್ರದೇಶದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಬಿಹಾರದ ಗವರ್ನರ್ ಲಾಲ್ ಜಿ ಟಂಡನ್ ಅವರನ್ನು ವರ್ಗಾವಣೆ ಮಾಡಿ ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಸುಪ್ರೀಂಕೋರ್ಟ್ ಹಿರಿಯ ವಕೀಲ ಜಗ್ ದೀಪ್ ಧಾನ್ಕಾರ್ ಅವರನ್ನು ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರರಾಗಿ ನೇಮಕಗೊಂಡಿದ್ದಾರೆ. ಬಿಜೆಪಿಯ ರಮೇಶ್ ಬ್ಯಾಸ್ ತ್ರಿಪುರಾ ಗವರ್ನರ್ ಆಗಿ ನೇಮಕವಾಗಿದ್ದಾರೆ.
ನಾಗಲ್ಯಾಂಡ್ ರಾಜ್ಯಪಾಲರಾಗಿ ಆರ್ ಎನ್ ರವಿ ಅವರನ್ನು ನೇಮಕ ಮಾಡಲಾಗಿದೆ. ಕನ್ನಡಿಗ ಪಿಬಿ ಆಚಾರ್ಯ ಅವರು ನಾಗಲ್ಯಾಂಡ್ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಿಜೆಪಿ ಶಾಸಕ ಫಗು ಚೌಹಾಣ್ ಅವರನ್ನು ಬಿಹಾರ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ