ನಾವೇನು ತಿನ್ನಬೇಕು ಎನ್ನುವುದನ್ನು ಸರಕಾರ ನಿರ್ಧರಿಸುವಂತಿಲ್ಲ : ಮಮತಾ
Team Udayavani, May 29, 2017, 7:48 PM IST
ಕೋಲ್ಕತ : “ದೇಶದಲ್ಲಿ ಗೋಹತ್ಯೆಯನ್ನು ನಿಷೇಧಿಸಿ ಕೇಂದ್ರ ಸರಕಾರ ಹೊರಡಿಸಿರುವ ಆದೇಶವು ಅಸಂವಿಧಾನಿಕವಾಗಿದೆ ಮಾತ್ರವಲ್ಲ ಇದು ಜಾತ್ಯತೀತ ವಿರೋಧಿ ಹಾಗೂ ಒಕ್ಕೂಟ ವ್ಯವಸ್ಥೆ ವಿರೋಧಿ ಕ್ರಮವಾಗಿದೆ’ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
“ನನ್ನ ಸರಕಾರ ಈ ಏಕಪಕ್ಷೀಯ ಕ್ರಮದ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದೆ; ಏಕೆಂದರೆ ಇದು ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುವಂತಿದೆ’ ಎಂದು ಮಮತಾ ಬ್ಯಾನರ್ಜಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
“ನಾವು ಏನನ್ನು ತಿನ್ನಬೇಕು ಎಂಬುದನ್ನು ಸರಕಾರ ನಿರ್ಧರಿಸುವಂತಿಲ್ಲ; ಆದ್ದರಿಂದ ಕೇಂದ್ರ ಸರಕಾರ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಕೂಡದೆಂದು ನಾನು ವಿನಂತಿಸುತ್ತೇನೆ’ ಎಂದು ಮಮತಾ ಹೇಳಿದರು.
ದೇಶದಲ್ಲಿನ ಎಲ್ಲ ಜಾತ್ಯತೀತ ಪಕ್ಷಗಳು ನನ್ನ ಈ ನಿಲುವನ್ನು ಬೆಂಬಲಿಸಿವೆ. ಅಂತೆಯೇ ನಾವು ಒಗ್ಗೂಡಿ ಕೇಂದ್ರ ಸರಕಾರದ ಈ ಅಸಂವಿಧಾನಿಕ ಕ್ರಮದ ವಿರುದ್ಧ ಕಾನೂನು ರೀತ್ಯಾ ಹೋರಾಡುವೆವು ಎಂದು ಮಮತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ