ತ್ರಿವಳಿ ತಲಾಖ್: ಪತಿಗೆ ಸಿಗಲಿದೆ ಜಾಮೀನು
Team Udayavani, Aug 10, 2018, 6:00 AM IST
ಹೊಸದಿಲ್ಲಿ: ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್ನಿಂದ ರಕ್ಷಿಸುವ ಸಂಬಂಧ ಇರುವ ವಿಧೇಯಕದಲ್ಲಿ ಕೇಂದ್ರ ಸರ್ಕಾರ ಕೊಂಚ ಬದಲಾವಣೆ ಮಾಡಿದೆ. ಇದುವರೆಗೆ ಮುಸ್ಲಿಂ ಮಹಿಳೆಗೆ ತಲಾಖ್ ನೀಡಿದ ವ್ಯಕ್ತಿಗೆ ಜಾಮೀನು ನೀಡಲು ಅವಕಾಶ ಇರಲಿಲ್ಲ. ಇನ್ನು ಮುಂದೆ ಜಾಮೀನಿಗೆ ಅವಕಾಶ ಉಂಟು.
ಗುರುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ವಿಧೇಯಕಕ್ಕೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಒಟ್ಟು 3 ತಿದ್ದುಪಡಿಗಳಿಗೆ ಸಂಪುಟ ಸಮ್ಮತಿಸಿದೆ. ಲೋಕಸಭೆಯಲ್ಲಿ ಈಗಾಗಲೇ ಹಾಲಿ ಮಸೂದೆ ಅಂಗೀಕಾರವಾಗಿದೆ. ಆದರೆ ರಾಜ್ಯಸಭೆಯಲ್ಲಿ ಅಂಗೀಕಾರಕ್ಕೆ ಇನ್ನೂ ಬಾಕಿ ಇದೆ. ತಲಾಖ್ ನೀಡಿದ ವ್ಯಕ್ತಿಗೆ ಜಾಮೀನು ನೀಡದೇ ಇರುವ ಪ್ರಸ್ತಾಪಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ಮುಂಗಾರು ಅಧಿವೇಶನದ ಕೊನೆಯ ದಿನವಾಗಿರುವ ಶುಕ್ರವಾರ ಹೊಸ ವಿಧೇಯಕ ಮಂಡಿಸಿ ಅಂಗೀಕಾರ ಪಡೆಯುವ ಇರಾದೆ ಸರ್ಕಾರದ್ದು.
ಕೋರ್ಟಲ್ಲಿ ಪತ್ನಿಯ ವಾದ ಆಲಿಸಿದ ಬಳಿಕ ಜಾಮೀನು ನೀಡುವ ಬಗ್ಗೆ ಜಡ್ಜ್ ಅಂತಿಮ ತೀರ್ಮಾನ ಕೈಗೊಳ್ಳಬಹುದು. ಜತೆಗೆ ಪರಿಹಾರ ನೀಡಲು ಪತಿ ಒಪ್ಪಿದರೆ ಜಾಮೀನು ಕೊಡಲು ಅವಕಾಶ ಕಲ್ಪಿಸಿ ಕೊಡಲಾಗಿದೆ. ಜತೆಗೆ, ಪತಿಯು ರಾಜಿ ಸಂಧಾನಕ್ಕೆ ಒಪ್ಪಿದರೆ ಆತನ ವಿರುದ್ಧ ಸಲ್ಲಿಸಲಾಗಿರುವ ದೂರು ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ.
ಕಡಿಮೆ ದರದಲ್ಲಿ ಧಾನ್ಯ
ಕೇಂದ್ರ ಸರ್ಕಾರ ತನ್ನ ಬಳಿ ಇರುವ 35 ಲಕ್ಷ ಟನ್ ಹೆಚ್ಚವರಿ ಧಾನ್ಯಗಳನ್ನು ಸಗಟು ಬೆಲೆಗಿಂತ ಕಡಿಮೆ ದರದಲ್ಲಿ (ಕಿಲೋಗೆ 15 ರೂ.) ರಿಯಾಯ್ತಿಯಲ್ಲಿ ರಾಜ್ಯಗಳಿಗೆ ಪಡಿತರಕ್ಕಾಗಿ ಹಂಚಲು ನಿರ್ಧರಿಸಿದೆ. ಇದರಿಂದ ಸರ್ಕಾರಕ್ಕೆ 5237 ಕೋಟಿ ರೂ. ಹೊರೆಯಾಗಲಿದೆ. ಇದೇ ವೇಳೆ, 10ನೇ ತರಗತಿ ನಂತರದ ಒಬಿಸಿ ವಿದ್ಯಾರ್ಥಿವೇತನ ಮುಂದುವರಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ
KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್