ರಾಜಸ್ಥಾನದಲ್ಲಿ ಕೊರತೆ ಸೃಷ್ಟಿಸಿ ಹರಿಯಾಣಕ್ಕೆ ಯೂರಿಯ: ಸಿಎಂ ಗೆಹಲೋಟ್
Team Udayavani, Dec 24, 2018, 4:57 PM IST
ಜೈಪುರ : ರಾಜಸ್ಥಾನ ತನ್ನ ಕೈತಪ್ಪಿ ಹೋಗುವುದನ್ನು ಚುನಾವಣೆಗೆ ಮೊದಲೇ ಅರಿತಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಲ್ಲಿ ಕೃತಕವಾಗಿ ಯೂರಿಯ ಕೊರತೆ ಉಂಟಾಗುವಂತೆ ಮಾಡಿದ್ದು ಆ ಬಗ್ಗೆ ನೂತನ ರಾಜ್ಯ ಸರಕಾರ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ರಾಜಸ್ಥಾನದಂತೆ ಮಧ್ಯ ಪ್ರದೇಶವೂ ತನ್ನ ಕೈತಪ್ಪುವ ಭೀತಿಯಿಂದ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ಇಲ್ಲಿಯೂ ಕೃತಕ ಯೂರಿಯಾ ಕೊರತೆ ಸೃಷ್ಟಿಸಿದೆ. ಈ ಎರಡು ರಾಜ್ಯಗಳಿಗೆಂದು ಗೊತ್ತುಪಡಿಸಲಾಗಿದ್ದ ಯೂರಿಯಾ rack ಗಳನ್ನು ಹರಿಯಾಣಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ರಾಜಸ್ಥಾನದ ಕಾಂಗ್ರೆಸ್ ಸರಕಾರ ಈಗ ತನಿಖೆ ನಡೆಸುತ್ತಿದೆ ಎಂದು ಗೆಹಲೋಟ್ ಅವರಿಂದು ರಾಜಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಈಚೆಗೆ ನಡೆದಿದ್ದ ಪಂಚರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ದಲ್ಲಿ ಸೋಲುಂಡಿತ್ತು.
ರಾಜಸ್ಥಾನದ ಯಾವುದೇ ಜಿಲ್ಲೆಯಲ್ಲಿ ಯೂರಿಯ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೆಹಲೋಟ್ ಹೇಳಿದರು.
ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ರಾಜಸ್ಥಾನದಲ್ಲಿ ಯೂರಿಯವನ್ನು ಪೊಲೀಸ್ ರಕ್ಷಣೆಯಲ್ಲಿ ವಿತರಿಸಲಾಗುತ್ತಿತ್ತು ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೆಹ್ಲೋಟ್ ಕಟುವಾಗಿ ಟೀಕಿಸಿದರು. 2008-13ರ ರಾಜಸ್ಥಾನದ ಕಾಂಗ್ರೆಸ್ ಸರಕಾರಾವಧಿಯಲ್ಲಿ ಎಂದೂ ಕೂಡ ಅಂತಹ ಘಟನೆ ನಡೆದೇ ಇಲ್ಲ ಎಂದು ಗೆಹ್ಲೋಟ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್