ತೈಲ ಅಲ್ಪ ಅಗ್ಗ: ಪೆಟ್ರೋಲ್‌, ಡೀಸೆಲ್‌ ಬೆಲೆ 2.5 ರೂ. ಇಳಿಸಿದ ಕೇಂದ್ರ


Team Udayavani, Oct 5, 2018, 5:25 AM IST

petrol-price-600.jpg

ಹೊಸದಿಲ್ಲಿ: ಕಳೆದ ಹಲವು ದಿನಗಳಿಂದಲೂ ನಿರಂತರವಾಗಿ ಏರುತ್ತಿದ್ದ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯ ಬಿಸಿ ಕೊಂಚ ಕಡಿಮೆಯಾಗಿದೆ. ಬೆಲೆ ಏರಿಕೆಯ ಬಗ್ಗೆ ಜನರ ಆಕ್ರೋಶಕ್ಕೆ ಕೇಂದ್ರ ಸರಕಾರ ಕಿವಿಯಾಗಿದ್ದು, ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಲೀಟರ್‌ ಮೇಲೆ 2.50 ರೂ. ಇಳಿಕೆ ಮಾಡಿದೆ. ಈ ಸಂಬಂಧ ಗುರುವಾರ ಸುದ್ದಿಗೋಷ್ಠಿ ನಡೆಸಿದ ವಿತ್ತ ಸಚಿವ ಅರುಣ್‌ ಜೇಟ್ಲಿ, ಸರಕಾರವು ಅಬಕಾರಿ ಸುಂಕವನ್ನು ಲೀಟರ್‌ ಮೇಲೆ 1.50 ರೂ. ಇಳಿಸಿದ್ದು, ತೈಲ ಕಂಪೆನಿಗಳಿಗೆ ಪಾವತಿಯಾಗುವ ಮೊತ್ತದಲ್ಲಿ 1  ರೂ. ಇಳಿಕೆ ಮಾಡಿ ಘೋಷಿಸಿದೆ. ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ಸರಕಾರಕ್ಕೆ 10,500 ಕೋಟಿ ರೂ. ಹೊರೆಯಾಗಲಿದೆ. ಬೆಲೆ ಇಳಿಕೆ ನಿರ್ಧಾರವು ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ.

2014ರ ನವೆಂಬರ್‌ನಿಂದ 2016 ಜನವರಿಯವರೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆ ಯಾಗಿದ್ದರಿಂದ ಹಂತ ಹಂತವಾಗಿ ಸರಕಾರ ಪೆಟ್ರೋಲ್‌ ಮೇಲೆ ಲೀ.ಗೆ 11.77 ರೂ. ಹಾಗೂ ಡೀಸೆಲ್‌ ಮೇಲೆ ಲೀ.ಗೆ 13.47 ರೂ. ಅಬಕಾರಿ ಸುಂಕ ಏರಿಕೆ ಮಾಡಿತ್ತು. ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆ ಆಗುತ್ತಿದ್ದಂತೆ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮಾತ್ರ 2 ರೂ. ಇಳಿಕೆ ಮಾಡಲಾಗಿತ್ತು. ಕಳೆದ ಮೇ ತಿಂಗಳಿನಿಂದ ಬೆಲೆ ಏರಿಕೆಯಾಗುತ್ತಿದ್ದರೂ ಅಬಕಾರಿ ಸುಂಕದಲ್ಲಿ ಇಳಿಕೆ ಮಾಡಬೇಕು ಎಂಬ ಜನರ ಬೇಡಿಕೆಯನ್ನು ಸರಕಾರ ನಿರ್ಲಕ್ಷಿಸುತ್ತಲೇ ಬಂದಿತ್ತು. ತೈಲ ಸಚಿವ ಧರ್ಮೇಂದ್ರ ಪ್ರಧಾನ್‌ ಹಾಗೂ ವಿವಿಧ ಸಚಿವಾಲಯಗಳ ಸಮಿತಿ ಸಭೆಯ ಅನಂತರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

11 ರಾಜ್ಯಗಳಲ್ಲಿ ಇಳಿಕೆ
ಕೇಂದ್ರ ಸರಕಾರದ ನಿರ್ಧಾರ ಹೊರಬೀಳುತ್ತಿದ್ದಂತೆಯೇ ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರ, ಛತ್ತೀಸ್‌ಗಢ, ಗುಜರಾತ್‌, ಉತ್ತರಪ್ರದೇಶ, ಝಾರ್ಖಂಡ್‌, ತ್ರಿಪುರ, ಮಧ್ಯಪ್ರದೇಶ, ರಾಜಸ್ಥಾನ, ಅಸ್ಸಾಂ ಸಹಿತ 11 ರಾಜ್ಯಗಳು ಲೀ.ಗೆ 2.50 ರೂ. ಇಳಿಕೆ ಮಾಡಿವೆ. ಇದರಿಂದಾಗಿ ಈ ರಾಜ್ಯಗಳಲ್ಲಿ 5 ರೂ. ಇಳಿಕೆಯಾದಂತಾಗುತ್ತದೆ. ಸೇಲ್ಸ್‌ ಟ್ಯಾಕ್ಸ್‌ ಅಥವಾ ವ್ಯಾಟ್‌ನಲ್ಲಿ 2.50 ರೂ. ಇಳಿಕೆ ಮಾಡುವಂತೆ ಎಲ್ಲ ರಾಜ್ಯಗಳಿಗೂ ಪತ್ರ ಬರೆಯುತ್ತೇವೆ ಎಂದು ಜೇಟ್ಲಿ ಹೇಳಿದ್ದಾರೆ. ಕಚ್ಚಾ ತೈಲ ಬೆಲೆ ಏರಿರುವುದರಿಂದ ರಾಜ್ಯಗಳ ಆದಾಯದಲ್ಲೂ ಏರಿಕೆಯಾಗಿದೆ. ಹೀಗಾಗಿ 2.50 ರೂ. ಇಳಿಕೆ ಮಾಡುವುದರಿಂದ ಸರಕಾರಕ್ಕೆ ಯಾವುದೇ ನಷ್ಟ ಉಂಟಾಗುವುದಿಲ್ಲ ಎಂದು ಜೇಟ್ಲಿ ಹೇಳಿದ್ದಾರೆ. ಇನ್ನೊಂದೆಡೆ ಜೇಟ್ಲಿ ಪತ್ರ ಕೈಗೆ ಸಿಕ್ಕಿದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಿಹಾರ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದಾರೆ. ಕರ್ನಾಟಕ, ರಾಜಸ್ಥಾನ ಹಾಗೂ ಆಂಧ್ರಪ್ರದೇಶದಲ್ಲಿ ಈಗಾಗಲೇ ಬೆಲೆ ಇಳಿಕೆ ಮಾಡಲಾಗಿದೆ.

ತೈಲ ಆಮದು ಹೆಚ್ಚಿದ್ದರಿಂದಾಗಿ ಭಾರತ ಆರ್ಥಿಕ ಕುಸಿತ ಎದುರಿಸುತ್ತಿದೆ. ತೈಲ ಆಮದು ಕಡಿಮೆ ಮಾಡಿ ರಫ್ತು ಹೆಚ್ಚಿಸಬೇಕಿದೆ. ರಫ್ತು ಮಾಡಬಹುದಾದ ಉತ್ಪನ್ನಗಳನ್ನು ದೇಶ ಕಂಡುಕೊಳ್ಳಬೇಕಿದೆ. ಎಥೆನಾಲ್‌, ಮೆಥೆನಾಲ್‌, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್‌ ಸಾರಿಗೆಯನ್ನು ಪರ್ಯಾಯವಾಗಿ ಬಳಸುವ ಅವಕಾಶವನ್ನು ನಾವು ಹೊಂದಿದ್ದೇವೆ.
– ನಿತಿನ್‌ ಗಡ್ಕರಿ, ಕೇಂದ್ರ ಸಚಿವ

ಕೇಂದ್ರ ಸರಕಾರ ತೈಲ ಬೆಲೆಯಲ್ಲಿ ಕನಿಷ್ಠ ಪಕ್ಷ ಲೀಟರ್‌ಗೆ 10 ರೂ.ಗಳನ್ನಾದರೂ ಇಳಿಕೆ ಮಾಡಬೇಕು. ಜತೆಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ಅನ್ನು  ವಾಪಸ್‌ ಪಡೆಯಬೇಕು.
– ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಲ ಸಿಎಂ

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ನಿರ್ಧಾರವು ಜನಸಾಮಾನ್ಯರ ಕ್ಷೇಮಾಭಿವೃದ್ಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕಿರುವ ಸಂವೇದನೆಯನ್ನು ತೋರಿಸುತ್ತಿದೆ.
– ಅಮಿತ್‌ ಶಾ,  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ರಾಜ್ಯ ಸರಕಾರ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಮಾಡಿದರೆ ಹೆಚ್ಚುವರಿ ತೆರಿಗೆ ಪ್ರಮಾಣದಲ್ಲಿ ಕಡಿತವಾಗಲಿದೆಯೇ ಹೊರತು ಯಾವುದೇ ಹೊರೆ ಬೀಳುವುದಿಲ್ಲ. ರಾಜ್ಯ ಸರಕಾರ ಇತ್ತೀಚೆಗೆ ತೈಲ ಬೆಲೆ ಇಳಿಕೆ ಮಾಡಿದ್ದು 46 ಪೈಸೆಯೇ ಹೊರತು 2 ರೂ. ಮಾಡಿಲ್ಲ.
– ಬಿ.ಎಸ್‌. ಯಡಿಯೂರಪ್ಪ, ವಿಪಕ್ಷ  ನಾಯಕ

ರಾಜ್ಯ ಸರಕಾರ ತೈಲ ಬೆಲೆ ಇಳಿಕೆ ಮಾಡಿ ಸರಿಸುಮಾರು ತಿಂಗಳು ಕಳೆದಿದೆ. ಈಗಲಾದರೂ ಕೇಂದ್ರ ಜನ ಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಲು ಪೆಟ್ರೋಲ್‌, ಡೀಸೆಲ್‌ ದರ ದಲ್ಲಿ ತಲಾ 2.50 ರೂ. ಇಳಿಕೆ ಮಾಡಿದೆ. ಇನ್ನು ಸರಕಾರಿ ಸಾರಿಗೆ ಬಸ್‌ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ.
– ಎಚ್‌.ಡಿ. ಕುಮಾರಸ್ವಾಮಿ

ಕೇಂದ್ರವು ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ತಲಾ 2.50 ರೂ. ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೂ ತಲಾ 2.50 ರೂ. ಇಳಿಕೆ ಮಾಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಆದರೆ ಈಗಾಗಲೇ ತುಸು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಮತ್ತೆ ಈಗ ಕಡಿಮೆ ಮಾಡುವ ಪ್ರಮೇಯವೇ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.