ರಮ್ಜಾನ್‌ ವೇಳೆ ಕದನ ವಿರಾಮಕ್ಕೆ ಕೇಂದ್ರ ಅಸ್ತು


Team Udayavani, May 17, 2018, 6:00 AM IST

jk-ramzan.jpg

ಹೊಸದಿಲ್ಲಿ: ರಂಜಾನ್‌ ಅವಧಿಯಲ್ಲಿ ಜಮ್ಮು-ಕಾಶ್ಮೀರದಾದ್ಯಂತ ಕದನ ವಿರಾಮ ಘೋಷಿಸಬೇಕು ಎನ್ನುವ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಸ್ತಾಪವನ್ನು ಕೇಂದ್ರ ಸರಕಾರ ಒಪ್ಪಿದೆ. ಸಿಎಂ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸಲಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೀಮಿತ ಕದನ ವಿರಾಮ ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಬುಧವಾರ ತಿಳಿಸಿದೆ.

ರಮ್ಜಾನ್‌ ಅನ್ನು ಶಾಂತಿಯುತ ವಾತಾವರಣದಲ್ಲಿ ಆಚರಿಸಲು ಶಾಂತಿಪ್ರಿಯ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಈ ಕುರಿತು ಸಿಎಂ ಮೆಹಬೂಬಾರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಗೃಹ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಈ ನಿರ್ಧಾರವನ್ನು ಹಾಲಿ ಸಿಎಂ ಮೆಹಬೂಬಾ ಹಾಗೂ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ ಸೇರಿದಂತೆ ಪ್ರಮುಖರು ಸ್ವಾಗತಿಸಿದ್ದಾರೆ.

ದಾಳಿ ಮಾಡಿದರೆ ಪ್ರತ್ಯುತ್ತರ: ರಂಜಾನ್‌ ಅವಧಿಯಲ್ಲಿ ಕಣಿವೆ ರಾಜ್ಯಾದ್ಯಂತ ಯಾವುದೇ ಕಾರ್ಯಾಚರಣೆ ನಡೆಸದಂತೆ ಭದ್ರತಾ ಪಡೆಗಳಿಗೆ ಸರಕಾರ ಸೂಚಿಸಿದೆ. ಆದರೆ, ಒಂದು ವೇಳೆ ಭದ್ರತಾ ಪಡೆಗಳ ಮೇಲೆ ಯಾರಾದರೂ ದಾಳಿ ನಡೆಸಿದರೆ, ಅಂಥ ಸಂದರ್ಭದಲ್ಲಿ ತಕ್ಕ ಪ್ರತ್ಯುತ್ತರ ನೀಡಬಹುದು. ಅಷ್ಟೇ ಅಲ್ಲ, ಅಮಾಯಕರ ಜೀವವನ್ನು ರಕ್ಷಿಸಬೇಕಾದ ಸಂದರ್ಭ ಬಂದಾಗಲೂ ಸೂಕ್ತ ಕ್ರಮ ಕೈಗೊಳ್ಳಬಹುದು ಎಂದೂ ಸಚಿವಾಲಯ ಹೇಳಿದೆ. ಶಾಂತಿ ನೆಲೆಸುವ ಉದ್ದೇಶದಿಂದ ಕೈಗೊಂಡಿರುವ ಈ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು ಹಾಗೂ ಯಾವುದೇ ಸಮಸ್ಯೆಯಿಲ್ಲದೇ ರಂಜಾನ್‌ ಆಚರಿಸಲು ಮುಸ್ಲಿಂ ಸಹೋದರ, ಸಹೋದರಿಯರಿಗೆ ನೆರವಾಗಬೇಕು ಎಂದೂ ಗೃಹ ಇಲಾಖೆ ಹೇಳಿದೆ. ಮೇ 19ರಂದು ಪ್ರಧಾನಿ ಮೋದಿ ಅವರು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಇದರ ನಡುವೆಯೇ ಇಂಥ ಬೆಳವಣಿಗೆ ನಡೆದಿದೆ.

ಆಗಲ್ಲ ಎಂದಿದ್ದ ಬಿಜೆಪಿ: ಇತ್ತೀಚೆಗೆ ಸಿಎಂ ಮೆಹಬೂಬಾ ಅವರು ಕದನ ವಿರಾಮ ಘೋಷಣೆ ಪ್ರಸ್ತಾವ ಮಾಡಿದ್ದಾಗ ಅದನ್ನು ಬಿಜೆಪಿ ವಿರೋಧಿಸಿತ್ತು. ಇದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದೂ ಹೇಳಿತ್ತು. ಮಾನವ ಹಕ್ಕು ಸಂಸ್ಥೆಯೊಂದರ ವರದಿಯಂತೆ, ಕಣಿವೆ ರಾಜ್ಯದಲ್ಲಿ ನಡೆದ ಪ್ರತಿಭಟನೆಗಳು ಹಾಗೂ ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ 2016ರಲ್ಲಿ 145 ಮಂದಿ ನಾಗರಿಕರು, 2017ರಲ್ಲಿ 51 ಮಂದಿ ಮತ್ತು ಪ್ರಸಕ್ತ ವರ್ಷದ ಮೊದಲ 5 ತಿಂಗಳಲ್ಲಿ 39 ಮಂದಿ ಮೃತಪಟ್ಟಿದ್ದಾರೆ.

ಶೋಪಿಯಾನ್‌ನಲ್ಲಿ ಎನ್‌ಕೌಂಟರ್‌
ಬುಧವಾರ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್‌ ನಡೆದಿದೆ. ಸೇನಾ ಗಸ್ತು ವಾಹನದ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

ರಂಜಾನ್‌ ಸೀಮಿತ ಕದನ ವಿರಾಮವನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ವಿಚಾರದಲ್ಲಿ ವೈಯಕ್ತಿಕವಾಗಿ ಮಧ್ಯಪ್ರವೇಶ ಮಾಡಿದ ಪ್ರಧಾನಿ ಮೋದಿ ಹಾಗೂ ಸಚಿವ ರಾಜನಾಥ್‌ಗೆ ಧನ್ಯವಾದಗಳು.
ಮೆಹಬೂಬಾ ಮುಫ್ತಿ, 
ಜಮ್ಮು-ಕಾಶ್ಮೀರ ಸಿಎಂ

ಕೇಂದ್ರ ಸರಕಾರವು ಈಗ ಏಕಪಕ್ಷೀಯ ಕದನ ವಿರಾಮ ಘೋಷಿಸಿದೆ. ಉಗ್ರರೇನಾದರೂ ಕಾಲ್ಕೆರೆದುಕೊಂಡು ಬಂದರೆ, ಅವರ ನಿಜಬಣ್ಣ ಬಯಲಾಗುತ್ತದೆ. ಅವರು ನಿಜವಾಗಿಯೂ ಜನರ ಶತ್ರುಗಳು ಎಂಬುದು ಸಾಬೀತಾಗುತ್ತದೆ.
– ಒಮರ್‌ ಅಬ್ದುಲ್ಲಾ, 
ಜಮ್ಮು-ಕಾಶ್ಮೀರ ಮಾಜಿ ಸಿಎಂ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.