ಖಾದ್ಯ ತೈಲದ ದಾಸ್ತಾನಿಗೆ ಮಿತಿ ಹೇರಿದ ಕೇಂದ್ರ ಸರ್ಕಾರ
Team Udayavani, Oct 11, 2021, 6:10 AM IST
ನವದೆಹಲಿ: ಖಾದ್ಯ ತೈಲಗಳ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಕೇಂದ್ರ ಸರ್ಕಾರ, ಈಗ ವ್ಯಾಪಾರಿಗಳಿಗೆ ಖಾದ್ಯ ತೈಲ ಮತ್ತು ಎಣ್ಣೆ ಬೀಜಗಳ ದಾಸ್ತಾನಿಗೆ ಮಿತಿ ಹೇರಿದೆ.
ಅಲ್ಲದೆ, ಮುಂದಿನ ಮಾರ್ಚ್ 31ರವರೆಗೆ ಆಮದು ಹಾಗೂ ರಫ್ತು ಮೇಲೂ ನಿರ್ಬಂಧ ಹೇರಿದೆ. ಈ ಮೂಲಕ ಅಡುಗೆಎಣ್ಣೆಯ ದರ ಇಳಿಸಿ, ಗ್ರಾಹಕರ ಹೊರೆ ತಗ್ಗಿಸುವುದು ಸರ್ಕಾರದ ಉದ್ದೇಶವಾಗಿದೆ.
ಕಳೆದ ಒಂದು ವರ್ಷದಲ್ಲಿ ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಖಾದ್ಯ ತೈಲದ ದರ ಶೇ.46.15ರಷ್ಟು ಹೆಚ್ಚಳವಾಗಿದೆ.
ಈಗ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೊಸ ಆದೇಶ ಹೊರಡಿಸಿದ್ದು, ಆಯಾ ರಾಜ್ಯಗಳಲ್ಲಿ ಲಭ್ಯವಿರುವ ದಾಸ್ತಾನು ಮತ್ತು ಬಳಕೆಯ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು, ಅಲ್ಲಿನ ಸರ್ಕಾರಗಳು ಖಾದ್ಯ ತೈಲ ಮತ್ತು ಎಣ್ಣೆಬೀಜಗಳ ದಾಸ್ತಾನಿಗೆ ಎಷ್ಟು ಮಿತಿ ಹೇರಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ಸೂಚಿಸಲಾಗಿದೆ. ಆದರೆ, ಕೆಲವು ಆಮದುದಾರರು ಮತ್ತು ರಫ್ತುದಾರರಿಗೆ ಮಾತ್ರ ಈ ಮಿತಿಯಿಂದ ವಿನಾಯ್ತಿ ನೀಡಲಾಗಿದೆ.
ಸನ್ಫ್ಲವರ್ ಎಣ್ಣೆ ದರ ಕಳೆದ ವರ್ಷ ಕೆಜಿಗೆ 122.82 ರೂ. ಇದ್ದಿದ್ದು ಈ ವರ್ಷ 170.09 ರೂ. ಆಗಿದೆ. ತಾಳೆ ಎಣ್ಣೆ 95 ರೂ.ಗಳಿಂದ ಈಗ 132 ರೂ.ಗೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ