ಫೇಲ್ ಮಾಡುವ ನೀತಿಗೆ ಕೇಂದ್ರ ಸಂಪುಟ ಅನುಮತಿ
Team Udayavani, Aug 3, 2017, 9:40 AM IST
ಹೊಸದಿಲ್ಲಿ: ಕರ್ನಾಟಕ ಸರಕಾರದ ವಿರೋಧದ ನಡುವೆಯೇ ಒಂದನೇ ತರಗತಿಯಿಂದ ಎಂಟನೇ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲು ಅವಕಾಶ ನೀಡುವ ಮಸೂದೆಗೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಆದರೆ, ಈ ತರಗತಿಗಳಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಶೀಘ್ರದಲ್ಲೇ ನಡೆಯುವ ಪೂರಕ ಪರೀಕ್ಷೆ ಬರೆದು ಪಾಸ್ ಆದರೆ ಮುಂದಿನ ತರಗತಿಗೆ ಹೋಗಲು ಅವಕಾಶ ನೀಡಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿದ್ಧಪಡಿಸಿರುವ ಶಿಫಾರಸಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಅದಕ್ಕಾಗಿ ಕಡ್ಡಾಯ ಉಚಿತ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಕೊಂಚ ಬದಲಾವಣೆಯನ್ನು ಮಾಡಲಾಗಿದ್ದು, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲು ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಇದೇ ವೇಳೆ, ಸಂಪುಟ ಸಭೆಯಲ್ಲಿ 20 ವಿಶ್ವದರ್ಜೆಯ ಶೈಕ್ಷಣಿಕ ಸಂಸ್ಥೆಗಳನ್ನು ಮತ್ತು ಎನ್ಆರ್ಐಗಳಿಗೆ ಪ್ರಾತಿನಿಧಿಕ ಮತ ಚಲಾವಣೆಗೆ ಸಂಬಂಧಿಸಿದ ಕಾಯ್ದೆಗೆ ಅನುಮೋದನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!