ಆರ್ಟಿಐ ಹುದ್ದೆ ಭರ್ತಿಗೆ ಸುಪ್ರೀಂಕೋರ್ಟ್ ಸೂಚನೆ
Team Udayavani, Jul 3, 2018, 6:00 AM IST
ಹೊಸದಿಲ್ಲಿ: ಮಾಹಿತಿ ಹಕ್ಕು ಆಯೋಗದ ಹುದ್ದೆಗಳ ಭರ್ತಿಗೆ ವಿಳಂಬ ತೋರುತ್ತಿರುವ ಕೇಂದ್ರ ಸರಕಾರ ಹಾಗೂ 8 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಮಾಡಿದೆ.
ಕೇಂದ್ರ ಸರಕಾರ ಮಾತ್ರವಲ್ಲದೆ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ ರಾಜ್ಯಗಳು ಆರ್ಟಿಐ ಆಯುಕ್ತ ಹುದ್ದೆಗಳ ನೇಮಕಾತಿ ಮಾಡುವಲ್ಲಿ ನಿರ್ಲಕ್ಷ್ಯವಹಿಸಿವೆ. ಇದ ರಿಂದ ಆರ್ಟಿಐನಡಿ ಕೇಳಲಾಗಿದ್ದ ಸಹಸ್ರಾರು ಮನವಿಗಳು ಬಾಕಿ ಉಳಿ ಯುತ್ತಿವೆ ಎಂದು ಆರೋಪಿಸಿ ಸಲ್ಲಿಸ ಲಾಗಿದ್ದ ಅರ್ಜಿಯನ್ನು ಸೋಮವಾರ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಆಯಾ ರಾಜ್ಯಗಳಿಗೆ ಸೂಚಿಸಿದೆ.
ಕೇಂದ್ರೀಯ ಮಾಹಿತಿ ಆಯೋಗದ ಮುಂದೆ 23 ಸಾವಿರಕ್ಕೂ ಅಧಿಕ ಅರ್ಜಿಗಳು ಬಾಕಿ ಇವೆ. ಕರ್ನಾಟಕದಲ್ಲಿ 6 ಹುದ್ದೆಗಳು ಖಾಲಿಯಿದ್ದು, 33 ದೂರು ಗಳು ಬಾಕಿ ಇವೆ. ಮಹಾರಾಷ್ಟ್ರವೊಂದ ರಲ್ಲೇ 40 ಸಾವಿರ ಅರ್ಜಿಗಳು, ಕೇರಳದಲ್ಲಿ 14 ಸಾವಿರ ಅರ್ಜಿಗಳು ಹಾಗೂ ಬಂಗಾಳದಲ್ಲಿ 10 ವರ್ಷದಿಂದಲೂ ಅರ್ಜಿಗಳು ವಿಲೇವಾರಿಗೆ ಕಾಯುತ್ತಿವೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.
10 ದಿನದಲ್ಲಿ ಅಫಿಡವಿಟ್ ಸಲ್ಲಿಸಿ: ದೇಶದಲ್ಲಿ ಕಾಲಮಿತಿಯೊಳಗೆ ಲೋಕ ಪಾಲರ ನೇಮಕಕ್ಕೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಕೇಂದ್ರ ಸರಕಾರ ವನ್ನು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, 10 ದಿನಗಳ ಒಳಗೆ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ