ಮುಂದುವರಿದ ಬಿಕ್ಕಟ್ಟು; ಕೇಂದ್ರ v/s ರೈತರು-ನೂತನ ಕೃಷಿ ಕಾಯ್ದೆ ಹಿಂಪಡೆಯಲ್ಲ ಎಂದ ಕೇಂದ್ರ
ಕಳೆದ ಐದು ದಿನಗಳಿಂದ ಪಂಜಾಬ್ ಮತ್ತು ಹರ್ಯಾಣ ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
Team Udayavani, Dec 1, 2020, 6:38 PM IST
ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ರೈತ ಸಂಘಟನೆಯ ಮುಖಂಡರನ್ನು ಕೇಂದ್ರ ಸರ್ಕಾರ ಮಂಗಳವಾರ (ಡಿಸೆಂಬರ್ 1, 2020) ಮಾತುಕತೆ ಆಹ್ವಾನಿಸಿದ್ದು, ಯಾವುದೇ ಕಾರಣಕ್ಕೂ ನೂತನ ಕಾಯ್ದೆಯನ್ನು ಹಿಂಪಡೆಯಲ್ಲ ಎಂದು ಕೇಂದ್ರ ಸ್ಪಷ್ಟಪಡಿಸುವ ಮೂಲಕ ರೈತರು ಮತ್ತು ಕೇಂದ್ರದ ನಡುವಿನ ಹಗ್ಗಜಗ್ಗಾಟ ಮುಂದುವರಿದಂತಾಗಿದೆ.
ನೂತನ ಕಾಯ್ದೆಗೆ ಸಂಬಂಧಿಸಿದಂತೆ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಬಗ್ಗೆ ಕೇಂದ್ರ ಸರ್ಕಾರ ನೀಡಿದ್ದ ಆಫರ್ ಅನ್ನು ರೈತ ಮುಖಂಡರು ತಿರಸ್ಕರಿಸಿರುವುದಾಗಿ ಮೂಲಗಳು ತಿಳಿಸಿವೆ. ಸತತ ಮೂರು ಗಂಟೆಗಳಿಂದ ನಡೆಯುತ್ತಿದ್ದ ಮಾತುಕತೆ ಇನ್ನೂ ಮುಂದುವರಿದಿರುವುದಾಗಿ ವರದಿ ಹೇಳಿದೆ.
ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕಳೆದ ಐದು ದಿನಗಳಿಂದ ಪಂಜಾಬ್ ಮತ್ತು ಹರ್ಯಾಣ ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಏತನ್ಮಧ್ಯೆ ಷರತ್ತುಬದ್ಧ ಮಾತುಕತೆ ಆಹ್ವಾನವನ್ನು ರೈತರು ತಿರಸ್ಕರಿಸಿದ್ದರು.
ಇದನ್ನೂ ಓದಿ:ವಾಟ್ಸಾಪ್ ಹೇಗೆ ಹ್ಯಾಕ್ ಆಗುತ್ತದೆ ಗೊತ್ತಾ? ಏನಿದು ನಿಗೂಢ OTP ಸ್ಕ್ಯಾಮ್…
ಕೃಷಿ ಸಚಿವ ನರೇಂದ್ರ ಸಿಂಗ್ ಟೋಮರ್, ಪಿಯೂಸ್ ಗೋಯಲ್ ಹಾಗೂ ಸೋಮ್ ಪ್ರಕಾಶ್ ರೈತ ಸಂಘಟನೆಯ ಮುಖಂಡರ ಜತೆ ನೂತನ ಕಾಯ್ದೆ ಕುರಿತು ಮಾತುಕತೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್
ದೆಹಲಿ: ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; 200 ಮಂದಿ ದೆಹಲಿ ಪೊಲೀಸರ ವಶಕ್ಕೆ
ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’