ಥಳಿಸಿ ಸಾಮೂಹಿಕ ಹತ್ಯೆ ತಡೆಗೆ ಎರಡು ಸಮಿತಿ
Team Udayavani, Jul 24, 2018, 6:00 AM IST
ಹೊಸದಿಲ್ಲಿ/ಜೈಪುರ: ದೇಶಾದ್ಯಂತ ಹೆಚ್ಚುತ್ತಿರುವ ಥಳಿಸಿ ಸಾಮೂಹಿಕವಾಗಿ ಹತ್ಯೆ ಗೈಯುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರಕಾರ, ಇಂಥ ಪ್ರಕರಣಗಳ ತಡೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಲಹೆ ನೀಡಲು ಕೇಂದ್ರ ಸರಕಾರ ಎರಡು ಸಮಿತಿಗಳನ್ನು ರಚಿಸಿದೆ.
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತಾಧಿಕಾರದ ಸಚಿವರ ಸಮಿತಿ ಹಾಗೂ ಗೃಹ ಕಾರ್ಯದರ್ಶಿ ನೇತೃತ್ವದಲ್ಲಿ ನಾಲ್ವರು ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಇಂತಹ ಘಟನೆಗಳನ್ನು ನಿಯಂತ್ರಿಸಲು ಸೂಕ್ತ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಲೋಕಸಭೆಯಲ್ಲಿ ಸಮಿತಿಗಳ ರಚನೆ ಬಗ್ಗೆ ವಿವರಣೆ ನೀಡಿದ ಗೃಹ ಸಚಿವ ರಾಜನಾಥ್ ಸಿಂಗ್, ಈ ಸಮಿತಿಗಳು 15 ದಿನಗಳಲ್ಲಿ ವರದಿ ನೀಡಲಿವೆ ಎಂದಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದ ಸಮಿತಿಯು ಸಾಮೂಹಿಕ ಹಿಂಸೆ ಮತ್ತು ಥಳಿಸಿ ಹತ್ಯೆಗೈಯುವ ಪ್ರಕರಣಗಳನ್ನು ತಡೆಯಲು ಕಾನೂನು ಕ್ರಮಗಳ ಸಲಹೆ ನೀಡಲಿದೆ. ಈ ಸಮಿತಿಯು ಸಚಿವರ ಸಮಿತಿಗೆ ವರದಿ ನೀಡಲಿದ್ದು, ಸಚಿವರ ಸಮಿತಿಯು ಪ್ರಧಾನಿ ನರೇಂದ್ರ ಮೋದಿಗೆ ವರದಿ ಮಾಡಲಿದೆ.
ಅಲ್ವಾರ್ ಥಳಿತ ಪ್ರಕರಣ ತನಿಖೆಗೆ ಆದೇಶ
ರಾಜಸ್ಥಾನದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಅಕºರ್ ಖಾನ್ ಅವರನ್ನು ಥಳಿಸಿ ಹತ್ಯೆಗೈದ ಪ್ರಕರಣ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಸಂಸತ್ತಲ್ಲೂ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ ಸಂಸದ ಕರಣ್ ಸಿಂಗ್, ಗೋ ರಕ್ಷಕರು ಎಂದು ಹೇಳಿಕೊಳ್ಳುವವರು ಈ ಕೊಲೆಯ ಹಿಂದಿದ್ದಾರೆ ಎಂದು ಆರೋಪಿಸಿದರು. ಈ ಹೇಳಿಕೆಗೆ ಬಿಜೆಪಿ ಸಂಸದರು ಪ್ರತಿಭಟಿಸಿದ್ದಲ್ಲದೆ, ಆರೋಪಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲು ವಿಳಂಬ ಮಾಡಿದ ಪೊಲೀಸರ ಕ್ರಮಕ್ಕೆ ಬಿಜೆಪಿ ಸಂಸದರೂ ಆಕ್ಷೇಪ ವ್ಯಕ್ತಪಡಿಸಿದರು.
ರಾಹುಲ್ ವರ್ಸಸ್ ಗೋಯಲ್: ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಕೇವಲ 6 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಸಂತ್ರಸ್ತನನ್ನು ಕರೆದೊಯ್ಯಲು 3 ತಾಸು ಯಾಕೆ ವಿಳಂಬವಾಯಿತು? ಯಾಕೆಂದರೆ ಅವರು ಚಹಾ ಕುಡಿಯುತ್ತ ಕುಳಿತಿದ್ದರು. ಇದು ಮೋದಿಯ ನವ ಭಾರತ. ಇಲ್ಲಿ ಮಾನವೀಯತೆಯ ಬದಲಿಗೆ ದ್ವೇಷವಿದೆ. ಇಲ್ಲಿ ಜನರನ್ನು ಥಳಿಸಿ ಸಾಯಿಸಲಾಗುತ್ತದೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಗೋಯೆಲ್, ಅಲ್ವಾರ್ ಘಟನೆಯಲ್ಲಿ ಕಠಿನ ಹಾಗೂ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವುದಾಗಿ ರಾಜ್ಯ ಭರವಸೆ ನೀಡಿದೆ. ಎಂದು ಹೇಳಿದ್ದಾರೆ.
ನಡೆದಿದ್ದೇನು?
ಕಳೆದ ಶನಿವಾರ ಹರ್ಯಾಣದ ಮೇವತ್ ಜಿಲ್ಲೆಯ ಡೈರಿ ಮಾಲಕ ಅಕºರ್ ಖಾನ್ರನ್ನು ಜಾನುವಾರು ಕಳ್ಳಸಾಗಣೆ ಆರೋಪದಲ್ಲಿ ರಾಜಸ್ಥಾನದ ಅಲ್ವಾರ್ನಲ್ಲಿ ಏಳು ಜನರ ಗುಂಪು ಥಳಿಸಿತ್ತು. ಘಟನೆ ಮಧ್ಯರಾತ್ರಿ ನಡೆದಿದ್ದು, ಪೊಲೀಸರು ಬೆಳಗಿನ ಜಾವ 3 ಗಂಟೆಗೆ ಸ್ಥಳಕ್ಕೆ ತಲುಪಿದ್ದರು. ಖಾನ್ನನ್ನು ನೇರವಾಗಿ ಪೊಲೀಸರು ಆಸ್ಪತ್ರೆಗೆ ಕೊಂಡೊಯ್ಯದೇ, ಅಲ್ಲಿದ್ದ ಜಾನುವಾರುಗಳನ್ನು ಕಳುಹಿಸಲು ವಾಹನ ವ್ಯವಸ್ಥೆ ಮಾಡಿ, ಚಹಾ ಕುಡಿದು ಹೊರಟಿದ್ದರು. ಇದರಿಂದಾಗಿ 6 ಕಿ.ಮೀ. ದೂರದಲ್ಲಿರುವ ಆಸ್ಪತ್ರೆಗೆ ತೆರಳಲು 3 ತಾಸು ವಿಳಂಬವಾಗಿತ್ತು. ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಆಂತರಿಕ ರಕ್ತಸ್ರಾವದಿಂದ ಅಕ್ಬರ್ ಸಾವನ್ನಪ್ಪಿದ್ದರು. ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ವಿಳಂಬವಾಗಿರುವುದಕ್ಕೆ ಪೊಲೀಸರ ಮೇಲೂ ಕ್ರಮ ಕೈಗೊಳ್ಳಲಾಗಿದೆ.
ಮಹಿಳೆ ಥಳಿಸಿ ಹತ್ಯೆ: 12 ಮಂದಿ ಬಂಧನ
ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಭೋಶ್ ಗ್ರಾಮದಲ್ಲಿ ಮಕ್ಕಳ ಕಳ್ಳತನದ ಶಂಕೆಯ ಮೇಲೆ ಮಹಿಳೆಯನ್ನು ಜನರು ಥಳಿಸಿ ಸಾಮೂಹಿಕವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ 12 ಜನರನ್ನು ಬಂಧಿಸಲಾಗಿದೆ. 25ರಿಂದ 30 ವರ್ಷದ ಮಹಿಳೆ ಮಾನಸಿಕ ಅಸ್ವಸ್ಥೆಯಂತೆ ಕಾಣಿಸುತ್ತಿದ್ದಳು. ಇನ್ನೂ ಆಕೆಯ ಗುರುತು ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್