Karnataka; ಅಕ್ಕಿ ನೀಡಬೇಕೆಂಬ ಮನವಿಯನ್ನು ಕೇಂದ್ರ ತಿರಸ್ಕರಿಸಿದೆ: ಸಚಿವ ಮುನಿಯಪ್ಪ
ಇದು ರಾಜಕೀಯ ಪ್ರೇರಿತ... ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ ಬಳಿಕ ಹೇಳಿಕೆ
Team Udayavani, Jun 23, 2023, 10:31 PM IST
ಹೊಸದಿಲ್ಲಿ: ದಾಸ್ತಾನು ಕೊರತೆಯ ಹಿನ್ನೆಲೆಯಲ್ಲಿ ಉಚಿತ ಅಕ್ಕಿ ವಿತರಣೆಯ ಚುನಾವಣ ಭರವಸೆಯ ಅನುಷ್ಠಾನಕ್ಕಾಗಿ ಅಕ್ಕಿ ಪೂರೈಸುವ ಕರ್ನಾಟಕ ಸರಕಾರದ ಮನವಿಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿರಸ್ಕರಿಸಿದ್ದಾರೆ ಎಂದು ರಾಜ್ಯ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಶುಕ್ರವಾರ ಹೇಳಿದ್ದಾರೆ.
ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ಮಾತನಾಡಿದ ಮುನಿಯಪ್ಪ, ”ರಾಜ್ಯ ಸರಕಾರ ಬಿಪಿಎಲ್ ಕಾರ್ಡುದಾರರಿಗೆ ತಲಾ 10 ಕೆಜಿ ಉಚಿತ ಅಕ್ಕಿಯನ್ನು ಘೋಷಿಸಿದೆ. ಅದಕ್ಕಾಗಿ ಅಕ್ಕಿ ನೀಡುವಂತೆ ಮನವಿ ಮಾಡಿದೆವು. ನಾವು ಬೆಲೆ ತೆರಲು ಸಿದ್ಧರಿದ್ದೇವೆ ಎಂದರೂ ಸ್ಟಾಕ್ ಇಲ್ಲ, ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದು ರಾಜಕೀಯ ಪ್ರೇರಿತ. ಅಕ್ಕಿ ಲಭ್ಯವಿದ್ದರೂ ನೀಡಲು ಸಚಿವರು ಸಿದ್ಧರಿಲ್ಲ ಎಂದರು.
ರಾಜ್ಯ ಸರ್ಕಾರವು “ಅನ್ನ ಭಾಗ್ಯ” ಯೋಜನೆಗೆ ಅಕ್ಕಿ ಸಂಗ್ರಹಿಸಲು ನಾಫೆಡ್, ಕೇಂದ್ರೀಯ ಭಂಡಾರ್ ಮತ್ತು ಎನ್ಸಿಸಿಎಫ್ನಂತಹ ಕೇಂದ್ರೀಯ ಸಂಸ್ಥೆಗಳನ್ನು ಗುರುತಿಸಿದೆ, ಮತ್ತು ಸರ್ಕಾರವು ತನ್ನ ಬದ್ಧತೆಯನ್ನು ಪೂರೈಸುತ್ತದೆ ಮತ್ತು ಬಡವರಿಗೆ ಉಚಿತ ಅಕ್ಕಿಯನ್ನು ಶೀಘ್ರವಾಗಿ ವಿತರಿಸುತ್ತದೆ ಎಂದರು. ಕರ್ನಾಟಕದಲ್ಲಿ 1.19 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡುದಾರರು ಮತ್ತು 4.42 ಕೋಟಿ ಫಲಾನುಭವಿಗಳಿದ್ದಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ